Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...