Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...