Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...