Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...