Homeಮುಖಪುಟಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪ್ರಕರಣದಿಂದ ದೆಹಲಿ ನ್ಯಾಯಾಲಯ ಸೋಮವಾರದಂದು ವಜಾ ಮಾಡಿದೆ. ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಅದು ಹೇಳಿದೆ. ಸೆಂಗಾರ್ ಅವರಲ್ಲದೆ, ಅವರ ಸಹಾಯಕರಾದ ಜ್ಞಾನೇಂದ್ರ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ ಅವರನ್ನು ಕೂಡ ಪ್ರಕರಣದಿಂದ ವಜಾ ಮಾಡಲಾಗಿದೆ.

ಆದಾಗ್ಯೂ, ಇತರ ನಾಲ್ವರು ಆರೋಪಿಗಳಾದ ಆಶಿಶ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ನ್ಯಾಯಾಲಯ ಆದೇಶಿಸಿದೆ. ಈ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ:ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಸಂತ್ರಸ್ತೆ ಅಥವಾ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಯನ್ನು ವಿಸ್ತರಿಸುವ ಕ್ರಿಮಿನಲ್ ಪಿತೂರಿಯ ಬಗ್ಗೆ ಕುಲದೀಪ್ ಸಿಂಗ್ ಸಿಂಗರ್ ವಿರುದ್ಧ ಆರೋಪ ಮಾಡಲು ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಆಗಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವು 2019 ರ ಜುಲೈ 28 ರಂದು ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲರು ಮತ್ತು ಇಬ್ಬರು ಸಂಬಂಧಿಕರು ರಾಯ್ ಬರೇಲಿಗೆ ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದೆ. ಅತ್ಯಾಚಾರ ಸಂತ್ರಸ್ತೆ ಮತ್ತು ವಕೀಲರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಂಬಂಧಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಸೆಂಗರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ:ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದಕ್ಕೂ ಮೊದಲು, ಅವರು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರಲ್ಲಿ ಅಪರಾಧಿ ಎಂದು ಸಾಬೀತಾಗಿತ್ತು. ಅವರಿಗೆ ಜೀವಿತಾವಧಿ ಜೈಲು ಶಿಕ್ಷೆಯನ್ನು ವಿಧಿಸಲಾಯಿತು ಮತ್ತು ರೂ 25 ಲಕ್ಷ ದಂಡವನ್ನು ಹಾಕಲಾಗಿತ್ತು.

ಉನ್ನಾವೋದ ಬಂಗಾರ್‌ಮೌ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸೆಂಗಾರ್ ವಿರುದ್ದ 2017 ರಲ್ಲಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿತ್ತು.

2020 ರ ಮಾರ್ಚ್ ತಿಂಗಳಲ್ಲಿ, ವಿಶೇಷ ನ್ಯಾಯಾಲಯವು 2018 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಸೆಂಗಾರ್, ಅವರ ಸಹೋದರ ಅತುಲ್ ಸಿಂಗ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಕುಲದೀಪ್ ಸೆಂಗಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದ್ದು, ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಅವರನ್ನು ವಿಧಾನಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ:ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...