Homeಮುಖಪುಟಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪ್ರಕರಣದಿಂದ ದೆಹಲಿ ನ್ಯಾಯಾಲಯ ಸೋಮವಾರದಂದು ವಜಾ ಮಾಡಿದೆ. ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಅದು ಹೇಳಿದೆ. ಸೆಂಗಾರ್ ಅವರಲ್ಲದೆ, ಅವರ ಸಹಾಯಕರಾದ ಜ್ಞಾನೇಂದ್ರ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ ಅವರನ್ನು ಕೂಡ ಪ್ರಕರಣದಿಂದ ವಜಾ ಮಾಡಲಾಗಿದೆ.

ಆದಾಗ್ಯೂ, ಇತರ ನಾಲ್ವರು ಆರೋಪಿಗಳಾದ ಆಶಿಶ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ನ್ಯಾಯಾಲಯ ಆದೇಶಿಸಿದೆ. ಈ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ:ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಸಂತ್ರಸ್ತೆ ಅಥವಾ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಯನ್ನು ವಿಸ್ತರಿಸುವ ಕ್ರಿಮಿನಲ್ ಪಿತೂರಿಯ ಬಗ್ಗೆ ಕುಲದೀಪ್ ಸಿಂಗ್ ಸಿಂಗರ್ ವಿರುದ್ಧ ಆರೋಪ ಮಾಡಲು ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಆಗಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವು 2019 ರ ಜುಲೈ 28 ರಂದು ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲರು ಮತ್ತು ಇಬ್ಬರು ಸಂಬಂಧಿಕರು ರಾಯ್ ಬರೇಲಿಗೆ ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದೆ. ಅತ್ಯಾಚಾರ ಸಂತ್ರಸ್ತೆ ಮತ್ತು ವಕೀಲರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಂಬಂಧಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಸೆಂಗರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ:ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದಕ್ಕೂ ಮೊದಲು, ಅವರು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರಲ್ಲಿ ಅಪರಾಧಿ ಎಂದು ಸಾಬೀತಾಗಿತ್ತು. ಅವರಿಗೆ ಜೀವಿತಾವಧಿ ಜೈಲು ಶಿಕ್ಷೆಯನ್ನು ವಿಧಿಸಲಾಯಿತು ಮತ್ತು ರೂ 25 ಲಕ್ಷ ದಂಡವನ್ನು ಹಾಕಲಾಗಿತ್ತು.

ಉನ್ನಾವೋದ ಬಂಗಾರ್‌ಮೌ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸೆಂಗಾರ್ ವಿರುದ್ದ 2017 ರಲ್ಲಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿತ್ತು.

2020 ರ ಮಾರ್ಚ್ ತಿಂಗಳಲ್ಲಿ, ವಿಶೇಷ ನ್ಯಾಯಾಲಯವು 2018 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಸೆಂಗಾರ್, ಅವರ ಸಹೋದರ ಅತುಲ್ ಸಿಂಗ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಕುಲದೀಪ್ ಸೆಂಗಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದ್ದು, ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಅವರನ್ನು ವಿಧಾನಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ:ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...