Homeಮುಖಪುಟಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪ್ರಕರಣದಿಂದ ದೆಹಲಿ ನ್ಯಾಯಾಲಯ ಸೋಮವಾರದಂದು ವಜಾ ಮಾಡಿದೆ. ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಅದು ಹೇಳಿದೆ. ಸೆಂಗಾರ್ ಅವರಲ್ಲದೆ, ಅವರ ಸಹಾಯಕರಾದ ಜ್ಞಾನೇಂದ್ರ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ ಅವರನ್ನು ಕೂಡ ಪ್ರಕರಣದಿಂದ ವಜಾ ಮಾಡಲಾಗಿದೆ.

ಆದಾಗ್ಯೂ, ಇತರ ನಾಲ್ವರು ಆರೋಪಿಗಳಾದ ಆಶಿಶ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ನ್ಯಾಯಾಲಯ ಆದೇಶಿಸಿದೆ. ಈ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ:ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಸಂತ್ರಸ್ತೆ ಅಥವಾ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಯನ್ನು ವಿಸ್ತರಿಸುವ ಕ್ರಿಮಿನಲ್ ಪಿತೂರಿಯ ಬಗ್ಗೆ ಕುಲದೀಪ್ ಸಿಂಗ್ ಸಿಂಗರ್ ವಿರುದ್ಧ ಆರೋಪ ಮಾಡಲು ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಆಗಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವು 2019 ರ ಜುಲೈ 28 ರಂದು ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲರು ಮತ್ತು ಇಬ್ಬರು ಸಂಬಂಧಿಕರು ರಾಯ್ ಬರೇಲಿಗೆ ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದೆ. ಅತ್ಯಾಚಾರ ಸಂತ್ರಸ್ತೆ ಮತ್ತು ವಕೀಲರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಂಬಂಧಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಸೆಂಗರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ:ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಇದಕ್ಕೂ ಮೊದಲು, ಅವರು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರಲ್ಲಿ ಅಪರಾಧಿ ಎಂದು ಸಾಬೀತಾಗಿತ್ತು. ಅವರಿಗೆ ಜೀವಿತಾವಧಿ ಜೈಲು ಶಿಕ್ಷೆಯನ್ನು ವಿಧಿಸಲಾಯಿತು ಮತ್ತು ರೂ 25 ಲಕ್ಷ ದಂಡವನ್ನು ಹಾಕಲಾಗಿತ್ತು.

ಉನ್ನಾವೋದ ಬಂಗಾರ್‌ಮೌ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸೆಂಗಾರ್ ವಿರುದ್ದ 2017 ರಲ್ಲಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿತ್ತು.

2020 ರ ಮಾರ್ಚ್ ತಿಂಗಳಲ್ಲಿ, ವಿಶೇಷ ನ್ಯಾಯಾಲಯವು 2018 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಸೆಂಗಾರ್, ಅವರ ಸಹೋದರ ಅತುಲ್ ಸಿಂಗ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಕುಲದೀಪ್ ಸೆಂಗಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದ್ದು, ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಅವರನ್ನು ವಿಧಾನಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ:ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...