Homeಮುಖಪುಟರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

- Advertisement -
- Advertisement -

2020 ರ ಮೇ ತಿಂಗಳಿನಿಂದ ಖಾಲಿಯಿರುವ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಒಕ್ಕೂಟ ಸರ್ಕಾರ ಕೊನೆಗೂ ಮುಖ್ಯಸ್ಥರನ್ನು ನೇಮಿಸಿದೆ. ಬಿಜೆಪಿಯ ಮಾಜಿ ವಕ್ತಾರ ಇಕ್ಬಾಲ್ ಸಿಂಗ್ ಲಾಲ್‌ಪುರ ಅವರು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಾಗಿ ಮುಂದಕ್ಕೆ ಕಾರ್ಯನಿರ್ವಹಿಸಲಿದ್ದಾರೆ. ಇಕ್ಬಾಲ್ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಕೂಡಾ ಆಗಿದ್ದಾರೆ.

ಇಕ್ಬಾಲ್ ಸಿಂಗ್‌ ಅವರ ನೇಮಕಾತಿಗೆ ಪ್ರತಿಕ್ರಿಯಿಸಿದ ಒಕ್ಕೂಟ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, “ಇಕ್ಬಾಲ್‌ ಸಿಂಗ್‌ ಅವರ ಆಡಳಿತ, ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿನ ಅಪಾರ ಅನುಭವವು ಪ್ರಧಾನಿ ಮೋದಿಯವರ ಬದ್ಧತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

1984 ರ ಗಲಭೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ, ಕರ್ತಾರ್‌ಪುರ ಕಾರಿಡಾರ್‌ನ ಕಾರ್ಯಾಚರಣೆ ಮತ್ತು ಶೀಘ್ರದಲ್ಲೇ ಆರಂಭವಾಗಲಿರುವ ‘ಗುರುದ್ವಾರ ಸರ್ಕ್ಯೂಟ್’ನಂತಹ ಕ್ರಮಗಳನ್ನು ಮೋದಿ ಸರ್ಕಾರ ಸಿಖ್ ಸಮುದಾಯಕ್ಕಾಗಿ ಮಾಡಿದೆ ಎಂದು ನಖ್ವಿ ಎತ್ತಿ ತೋರಿಸಿದ್ದಾರೆ.

“ಪ್ರತಿಯೊಬ್ಬರೂ ಸುರಕ್ಷಿತ ಮತ್ತು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಿರುವುದು ನಮ್ಮ ಸಂಕಲ್ಪವಾಗಿದೆ. ಆ ಸಂಕಲ್ಪವನ್ನು ಬಲಪಡಿಸುವಲ್ಲಿ ಇಕ್ಬಾಲ್ ಸಿಂಗ್ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಬಿಜೆಪಿಯ ವಕ್ತಾರರಾಗಿದ್ದ ಇಕ್ಬಾಲ್ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಏರುತ್ತೇನೆ ಎಂದು ಹೇಳಿದ್ದಾರೆ. “ಬಿಜೆಪಿಯಲ್ಲಿ ಮಾತ್ರ ಇರುವುದು ಅನಿವಾರ್ಯವಲ್ಲ, ಜನರಿಗೆ ನ್ಯಾಯ ಒದಗಿಸುವುದೇ ನನ್ನ ಗುರಿ. ಆದರೆ, ದೇಶದ ಕಾನೂನು ನನಗೆ ಎಲ್ಲಕ್ಕಿಂತ ಹೆಚ್ಚಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಅರ್ಜಿ ನಮೂನೆಗಳಲ್ಲಿ ’ಲೈಂಗಿಕ ಅಲ್ಪಸಂಖ್ಯಾತ’ ಆಯ್ಕೆ- ಕೇರಳ ಸರ್ಕಾರದ ಮಹತ್ವದ ನಿರ್ಧಾರ

ಜನರಿಗೆ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸಮಾಜದಲ್ಲಿ ಹರಡುತ್ತಿರುವ ಸುಳ್ಳುಗಳು ಮತ್ತು ಭಯವನ್ನು ಕೊನೆಗೊಳಿಸಲು ಕೆಲಸ ಮಾಡುವುದಾಗಿ ಹೇಳಿದ್ದಾರೆ.

2003 ಮತ್ತು 2006 ರ ನಡುವೆ ಆಯೋಗದ ನೇತೃತ್ವ ವಹಿಸಿದ್ದ ಎಸ್‌ ಟಾರ್ಲೋಚನ್ ಸಿಂಗ್ ನಂತರ, ಅಲ್ಪಸಂಖ್ಯಾತ ಆಯೋಗದ ಮುಖ್ಯಸ್ಥರಾಗಿರುವ ಎರಡನೇ ಸಿಖ್ ಧರ್ಮೀಯ ಇಕ್ಬಾಲ್‌ ಸಿಂಗ್‌ ಆಗಿದ್ದಾರೆ. ಈ ಮೊದಲು ಗೈರುಲ್ ಹಸನ್ ರಿಜ್ವಿ ಆಯೋಗದ ಅಧ್ಯಕ್ಷರಾಗಿದ್ದರು, ಅವರ ಅವಧಿ ಮೇ 2020 ರಲ್ಲಿ ಕೊನೆಗೊಂಡಿತ್ತು.

ಆಯೋಗವು ಅಧ್ಯಕ್ಷರನ್ನು ಒಳಗೊಂಡಂತೆ ಏಳು ಸದಸ್ಯರನ್ನು ಒಳಗೊಂಡಿದ್ದು, ಅದರಲ್ಲಿ ಐದು ಹುದ್ದೆಗಳು ಪ್ರಸ್ತುತ ಖಾಲಿ ಇವೆ. ಅತಿಫ್ ರಶೀದ್ ಆಯೋಗದ ಉಪಾಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read