Homeಮುಖಪುಟರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಬಿಜೆಪಿಯ ಮಾಜಿ ವಕ್ತಾರ ಆಯ್ಕೆ

- Advertisement -
- Advertisement -

2020 ರ ಮೇ ತಿಂಗಳಿನಿಂದ ಖಾಲಿಯಿರುವ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಒಕ್ಕೂಟ ಸರ್ಕಾರ ಕೊನೆಗೂ ಮುಖ್ಯಸ್ಥರನ್ನು ನೇಮಿಸಿದೆ. ಬಿಜೆಪಿಯ ಮಾಜಿ ವಕ್ತಾರ ಇಕ್ಬಾಲ್ ಸಿಂಗ್ ಲಾಲ್‌ಪುರ ಅವರು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಾಗಿ ಮುಂದಕ್ಕೆ ಕಾರ್ಯನಿರ್ವಹಿಸಲಿದ್ದಾರೆ. ಇಕ್ಬಾಲ್ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಕೂಡಾ ಆಗಿದ್ದಾರೆ.

ಇಕ್ಬಾಲ್ ಸಿಂಗ್‌ ಅವರ ನೇಮಕಾತಿಗೆ ಪ್ರತಿಕ್ರಿಯಿಸಿದ ಒಕ್ಕೂಟ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, “ಇಕ್ಬಾಲ್‌ ಸಿಂಗ್‌ ಅವರ ಆಡಳಿತ, ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿನ ಅಪಾರ ಅನುಭವವು ಪ್ರಧಾನಿ ಮೋದಿಯವರ ಬದ್ಧತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

1984 ರ ಗಲಭೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ, ಕರ್ತಾರ್‌ಪುರ ಕಾರಿಡಾರ್‌ನ ಕಾರ್ಯಾಚರಣೆ ಮತ್ತು ಶೀಘ್ರದಲ್ಲೇ ಆರಂಭವಾಗಲಿರುವ ‘ಗುರುದ್ವಾರ ಸರ್ಕ್ಯೂಟ್’ನಂತಹ ಕ್ರಮಗಳನ್ನು ಮೋದಿ ಸರ್ಕಾರ ಸಿಖ್ ಸಮುದಾಯಕ್ಕಾಗಿ ಮಾಡಿದೆ ಎಂದು ನಖ್ವಿ ಎತ್ತಿ ತೋರಿಸಿದ್ದಾರೆ.

“ಪ್ರತಿಯೊಬ್ಬರೂ ಸುರಕ್ಷಿತ ಮತ್ತು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಿರುವುದು ನಮ್ಮ ಸಂಕಲ್ಪವಾಗಿದೆ. ಆ ಸಂಕಲ್ಪವನ್ನು ಬಲಪಡಿಸುವಲ್ಲಿ ಇಕ್ಬಾಲ್ ಸಿಂಗ್ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಬಿಜೆಪಿಯ ವಕ್ತಾರರಾಗಿದ್ದ ಇಕ್ಬಾಲ್ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಏರುತ್ತೇನೆ ಎಂದು ಹೇಳಿದ್ದಾರೆ. “ಬಿಜೆಪಿಯಲ್ಲಿ ಮಾತ್ರ ಇರುವುದು ಅನಿವಾರ್ಯವಲ್ಲ, ಜನರಿಗೆ ನ್ಯಾಯ ಒದಗಿಸುವುದೇ ನನ್ನ ಗುರಿ. ಆದರೆ, ದೇಶದ ಕಾನೂನು ನನಗೆ ಎಲ್ಲಕ್ಕಿಂತ ಹೆಚ್ಚಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಅರ್ಜಿ ನಮೂನೆಗಳಲ್ಲಿ ’ಲೈಂಗಿಕ ಅಲ್ಪಸಂಖ್ಯಾತ’ ಆಯ್ಕೆ- ಕೇರಳ ಸರ್ಕಾರದ ಮಹತ್ವದ ನಿರ್ಧಾರ

ಜನರಿಗೆ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸಮಾಜದಲ್ಲಿ ಹರಡುತ್ತಿರುವ ಸುಳ್ಳುಗಳು ಮತ್ತು ಭಯವನ್ನು ಕೊನೆಗೊಳಿಸಲು ಕೆಲಸ ಮಾಡುವುದಾಗಿ ಹೇಳಿದ್ದಾರೆ.

2003 ಮತ್ತು 2006 ರ ನಡುವೆ ಆಯೋಗದ ನೇತೃತ್ವ ವಹಿಸಿದ್ದ ಎಸ್‌ ಟಾರ್ಲೋಚನ್ ಸಿಂಗ್ ನಂತರ, ಅಲ್ಪಸಂಖ್ಯಾತ ಆಯೋಗದ ಮುಖ್ಯಸ್ಥರಾಗಿರುವ ಎರಡನೇ ಸಿಖ್ ಧರ್ಮೀಯ ಇಕ್ಬಾಲ್‌ ಸಿಂಗ್‌ ಆಗಿದ್ದಾರೆ. ಈ ಮೊದಲು ಗೈರುಲ್ ಹಸನ್ ರಿಜ್ವಿ ಆಯೋಗದ ಅಧ್ಯಕ್ಷರಾಗಿದ್ದರು, ಅವರ ಅವಧಿ ಮೇ 2020 ರಲ್ಲಿ ಕೊನೆಗೊಂಡಿತ್ತು.

ಆಯೋಗವು ಅಧ್ಯಕ್ಷರನ್ನು ಒಳಗೊಂಡಂತೆ ಏಳು ಸದಸ್ಯರನ್ನು ಒಳಗೊಂಡಿದ್ದು, ಅದರಲ್ಲಿ ಐದು ಹುದ್ದೆಗಳು ಪ್ರಸ್ತುತ ಖಾಲಿ ಇವೆ. ಅತಿಫ್ ರಶೀದ್ ಆಯೋಗದ ಉಪಾಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...