Homeಮುಖಪುಟ2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

- Advertisement -
- Advertisement -

2ಜಿ ತರಂಗಾಂತರ (2G Spectrum) ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಸಂಜಯ್ ನಿರುಪಮ್ ಅವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಏಳು ವರ್ಷಗಳ ನಂತರ, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರಾಯ್ ಅವರು ಸಂಜಯ್ ನಿರುಪಮ್ ಅವರಿಗೆ “ಬೇಷರತ್ ಕ್ಷಮೆಯಾಚನೆ” ಯನ್ನು ಮಾಡಿದ್ದಾರೆ.

2014 ರಲ್ಲಿ, ವಿನೋದ್ ರಾಯ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 2G ತರಂಗಾಂತರ ಹಂಚಿಕೆ ಪ್ರಕರಣದ ವರದಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೊರಗಿಡುವಂತೆ ಒತ್ತಡ ಹೇರಿದ ಸಂಸದರಲ್ಲಿ ಸಂಜಯ್‌ ನಿರುಪಮ್ ಕೂಡಾ ಒಬ್ಬರು ಎಂದು  ಹೇಳಿದ್ದರು. ವಿನೋದ್‌ ರೈ ಅವರ 2014 ರ ಪುಸ್ತಕ, Not Just an Accountant: The Diary of the Nation’s Conscience Keeper ಬಿಡುಗಡೆಯ ಸಮಯದಲ್ಲಿ ಈ ಸಂದರ್ಶನವನ್ನು ಪ್ರಸಾರ ಮಾಡಲಾಯಿತು ಮತ್ತು ಮಾಧ್ಯಮಗಳಲ್ಲಿ ಅವರ ಹೇಳಿಕೆಯನ್ನು ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ವಿನೋದ್ ರಾಯ್ ಅವರ ಬೇಷರತ್ತಾದ ಕ್ಷಮೆಯಾಚನೆಯ ಕುರಿತು ಪ್ರತಿಕ್ರಿಯಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಜಯ್‌ ನಿರುಪಮ್, ಇದನ್ನು “ಸುವರ್ಣ ದಿನ” ಎಂದು ಬಣ್ಣಿಸಿದ್ದಾರೆ.

“ಆ ಸಮಯದಲ್ಲಿ ಅವರ ತಪ್ಪು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ನಾನು ಮಾಜಿ ಸಿಎಜಿಯನ್ನು ಒತ್ತಾಯಿಸಿದ್ದೆ. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ಹಾಗಾಗಿ ನಾನು ಹೊಸದಿಲ್ಲಿಯ ಪಟಿಯಾಲ ಹೌಸ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ವಿನೋದ್‌ ರೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ ಅವರು ಕಲ್ಲಿದ್ದಲು ಬ್ಲಾಕ್ ಮತ್ತು 2ಜಿ ತರಂಗಾಂತರ ಹಂಚಿಕೆ ಪ್ರಕರಣಗಳ ಕುರಿತ ವಿನೋದ್ ರಾಯ್ ಅವರ ವರದಿಯು ‘ಸಂಪೂರ್ಣ ನಕಲಿ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

“ಇದನ್ನು ನ್ಯಾಯಾಲಯ ಹೇಳಿಲ್ಲ. ಆದರೆ, 2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಅವರು ಸಿದ್ಧಪಡಿಸಿದ ವರದಿಯು ಅಸಂಬದ್ಧವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ… 2ಜಿ ವರದಿಯ ಪ್ರಕರಣದ, ಏಳು ವರ್ಷಗಳ ವಿಚಾರಣೆಯ ನಂತರ ಕೂಡಾ, ಆಪಾದಿತ ಹಗರಣದ ಬಗ್ಗೆ ಸಿಬಿಐ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವರದಿ ನಕಲಿಯಾಗಿತ್ತು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವರದಿಯೂ ನಕಲಿ. ಈ ನಕಲಿ ವರದಿಗಳಿಗೂ ವಿನೋದ್ ರಾಯ್ ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು” ಎಂದು ಸಂಜಯ್ ನಿರುಪಮ್‌ ಹೇಳಿದ್ದಾರೆ.

ನೋಟರಿ ಮಾಡಿದ ಅಫಿಡವಿತ್

ವಿನೋದ್ ರಾಯ್ ಅವರು ಮಾಡಿರುವ ನೋಟರಿ ಅಫಿಡವಿಟ್‌ನ ಪ್ರತಿಯೊಂದನ್ನು ಟ್ವೀಟ್ ಮಾಡಿರುವ ಸಂಜಯ್ ನಿರುಪಮ್‌, “ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಮಾಡಿದ 2ಜಿ ಮತ್ತು ಕಲ್ಲಿದ್ದಲು ನಿಕ್ಷೇಪಗಳ ಬಗ್ಗೆ ಎಲ್ಲಾ ಖೋಟಾ ವರದಿಗಳಿಗಾಗಿ ವಿನೋದ್‌ ರೈ ಅವರು ಈಗ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

ಅಕ್ಟೋಬರ್ 23 ರಂದು ವಿನೋದ್ ರಾಯ್ ಈ ಅಫಿಡವಿತ್‌ ಅನ್ನು ನೋಟರಿ ಮಾಡಿದ್ದರು. ಅದರಲ್ಲಿ, “ಸೆಪ್ಟೆಂಬರ್‌ 14 ರ ತನ್ನ ಪುಸ್ತಕ ಬಿಡುಗಡೆಯ ಸಮಯದಲ್ಲಿ ಸಂಜಯ್ ನಿರುಪಮ್ ವಿರುದ್ದ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಮಾಧ್ಯಮ ಸಂದರ್ಶನಗಳಲ್ಲಿ ಪ್ರಸಾರವಾಗಿದೆ ಮತ್ತು ಟೈಮ್ಸ್ ಆಫ್ ಇಂಡಿಯಾ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಸೇರಿದಂತೆ ಮಾಧ್ಯಮ ಪ್ರಕಟಣೆಗಳಲ್ಲಿ ಪ್ರಕಟಿಸಿದ್ದಾರೆ” ಎಂದು ಒಪ್ಪಿಕೊಂಡಿದ್ದಾರೆ.

“ಸಂದರ್ಶಕರು ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಪ್ರಮಾದಪೂರ್ವಕವಾಗಿ ಮತ್ತು ತಪ್ಪಾಗಿ ಸಂಜಯ್ ನಿರುಪಮ್ ಅವರ ಹೆಸರನ್ನು ಸಂಸದರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದೇನೆ. ಅದು ದೂರದರ್ಶನದಲ್ಲಿ ಪ್ರಸಾರವಾದ ಮತ್ತು ಪ್ರಕಟಿಸಿದ ಹೇಳಿಕೆಗಳು ವಾಸ್ತವವಾಗಿ ತಪ್ಪು” ಎಂದು ವಿನೋದ್ ರಾಯ್ ಹೇಳಿದ್ದಾರೆ.

“ನನ್ನ ಹೇಳಿಕೆಗಳಿಂದಾಗಿ ಸಂಜಯ್ ನಿರುಪಮ್, ಅವರ ಕುಟುಂಬ ಮತ್ತು ಅವರ ಹಿತೈಷಿಗಳಿಗೆ ಉಂಟಾದ ನೋವು ಮತ್ತು ಸಂಕಟವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ, ನನ್ನ ಇಂತಹ ಹೇಳಿಕೆಗಳಿಂದ ಉಂಟಾದ ನೋವಿಗೆ ನನ್ನ ಬೇಷರತ್ ಕ್ಷಮೆಯನ್ನು ಸಂಜಯ್ ನಿರುಪಮ್, ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅವರ ಹಿತೈಷಿಗಳೊಂದಿಗೆ ಕೇಳುತ್ತಿದ್ದೇನೆ….ಸಂಜಯ್ ನಿರುಪಮ್ ಅವರು ನನ್ನ ಬೇಷರತ್ ಕ್ಷಮೆಯನ್ನು ಪರಿಗಣಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಿನೋದ್ ರಾಯ್ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...