Homeಮುಖಪುಟ2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

- Advertisement -
- Advertisement -

2ಜಿ ತರಂಗಾಂತರ (2G Spectrum) ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಸಂಜಯ್ ನಿರುಪಮ್ ಅವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಏಳು ವರ್ಷಗಳ ನಂತರ, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರಾಯ್ ಅವರು ಸಂಜಯ್ ನಿರುಪಮ್ ಅವರಿಗೆ “ಬೇಷರತ್ ಕ್ಷಮೆಯಾಚನೆ” ಯನ್ನು ಮಾಡಿದ್ದಾರೆ.

2014 ರಲ್ಲಿ, ವಿನೋದ್ ರಾಯ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 2G ತರಂಗಾಂತರ ಹಂಚಿಕೆ ಪ್ರಕರಣದ ವರದಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೊರಗಿಡುವಂತೆ ಒತ್ತಡ ಹೇರಿದ ಸಂಸದರಲ್ಲಿ ಸಂಜಯ್‌ ನಿರುಪಮ್ ಕೂಡಾ ಒಬ್ಬರು ಎಂದು  ಹೇಳಿದ್ದರು. ವಿನೋದ್‌ ರೈ ಅವರ 2014 ರ ಪುಸ್ತಕ, Not Just an Accountant: The Diary of the Nation’s Conscience Keeper ಬಿಡುಗಡೆಯ ಸಮಯದಲ್ಲಿ ಈ ಸಂದರ್ಶನವನ್ನು ಪ್ರಸಾರ ಮಾಡಲಾಯಿತು ಮತ್ತು ಮಾಧ್ಯಮಗಳಲ್ಲಿ ಅವರ ಹೇಳಿಕೆಯನ್ನು ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ವಿನೋದ್ ರಾಯ್ ಅವರ ಬೇಷರತ್ತಾದ ಕ್ಷಮೆಯಾಚನೆಯ ಕುರಿತು ಪ್ರತಿಕ್ರಿಯಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಜಯ್‌ ನಿರುಪಮ್, ಇದನ್ನು “ಸುವರ್ಣ ದಿನ” ಎಂದು ಬಣ್ಣಿಸಿದ್ದಾರೆ.

“ಆ ಸಮಯದಲ್ಲಿ ಅವರ ತಪ್ಪು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ನಾನು ಮಾಜಿ ಸಿಎಜಿಯನ್ನು ಒತ್ತಾಯಿಸಿದ್ದೆ. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ಹಾಗಾಗಿ ನಾನು ಹೊಸದಿಲ್ಲಿಯ ಪಟಿಯಾಲ ಹೌಸ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ವಿನೋದ್‌ ರೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ ಅವರು ಕಲ್ಲಿದ್ದಲು ಬ್ಲಾಕ್ ಮತ್ತು 2ಜಿ ತರಂಗಾಂತರ ಹಂಚಿಕೆ ಪ್ರಕರಣಗಳ ಕುರಿತ ವಿನೋದ್ ರಾಯ್ ಅವರ ವರದಿಯು ‘ಸಂಪೂರ್ಣ ನಕಲಿ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

“ಇದನ್ನು ನ್ಯಾಯಾಲಯ ಹೇಳಿಲ್ಲ. ಆದರೆ, 2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಅವರು ಸಿದ್ಧಪಡಿಸಿದ ವರದಿಯು ಅಸಂಬದ್ಧವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ… 2ಜಿ ವರದಿಯ ಪ್ರಕರಣದ, ಏಳು ವರ್ಷಗಳ ವಿಚಾರಣೆಯ ನಂತರ ಕೂಡಾ, ಆಪಾದಿತ ಹಗರಣದ ಬಗ್ಗೆ ಸಿಬಿಐ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವರದಿ ನಕಲಿಯಾಗಿತ್ತು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವರದಿಯೂ ನಕಲಿ. ಈ ನಕಲಿ ವರದಿಗಳಿಗೂ ವಿನೋದ್ ರಾಯ್ ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು” ಎಂದು ಸಂಜಯ್ ನಿರುಪಮ್‌ ಹೇಳಿದ್ದಾರೆ.

ನೋಟರಿ ಮಾಡಿದ ಅಫಿಡವಿತ್

ವಿನೋದ್ ರಾಯ್ ಅವರು ಮಾಡಿರುವ ನೋಟರಿ ಅಫಿಡವಿಟ್‌ನ ಪ್ರತಿಯೊಂದನ್ನು ಟ್ವೀಟ್ ಮಾಡಿರುವ ಸಂಜಯ್ ನಿರುಪಮ್‌, “ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಮಾಡಿದ 2ಜಿ ಮತ್ತು ಕಲ್ಲಿದ್ದಲು ನಿಕ್ಷೇಪಗಳ ಬಗ್ಗೆ ಎಲ್ಲಾ ಖೋಟಾ ವರದಿಗಳಿಗಾಗಿ ವಿನೋದ್‌ ರೈ ಅವರು ಈಗ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

ಅಕ್ಟೋಬರ್ 23 ರಂದು ವಿನೋದ್ ರಾಯ್ ಈ ಅಫಿಡವಿತ್‌ ಅನ್ನು ನೋಟರಿ ಮಾಡಿದ್ದರು. ಅದರಲ್ಲಿ, “ಸೆಪ್ಟೆಂಬರ್‌ 14 ರ ತನ್ನ ಪುಸ್ತಕ ಬಿಡುಗಡೆಯ ಸಮಯದಲ್ಲಿ ಸಂಜಯ್ ನಿರುಪಮ್ ವಿರುದ್ದ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಮಾಧ್ಯಮ ಸಂದರ್ಶನಗಳಲ್ಲಿ ಪ್ರಸಾರವಾಗಿದೆ ಮತ್ತು ಟೈಮ್ಸ್ ಆಫ್ ಇಂಡಿಯಾ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಸೇರಿದಂತೆ ಮಾಧ್ಯಮ ಪ್ರಕಟಣೆಗಳಲ್ಲಿ ಪ್ರಕಟಿಸಿದ್ದಾರೆ” ಎಂದು ಒಪ್ಪಿಕೊಂಡಿದ್ದಾರೆ.

“ಸಂದರ್ಶಕರು ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಪ್ರಮಾದಪೂರ್ವಕವಾಗಿ ಮತ್ತು ತಪ್ಪಾಗಿ ಸಂಜಯ್ ನಿರುಪಮ್ ಅವರ ಹೆಸರನ್ನು ಸಂಸದರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದೇನೆ. ಅದು ದೂರದರ್ಶನದಲ್ಲಿ ಪ್ರಸಾರವಾದ ಮತ್ತು ಪ್ರಕಟಿಸಿದ ಹೇಳಿಕೆಗಳು ವಾಸ್ತವವಾಗಿ ತಪ್ಪು” ಎಂದು ವಿನೋದ್ ರಾಯ್ ಹೇಳಿದ್ದಾರೆ.

“ನನ್ನ ಹೇಳಿಕೆಗಳಿಂದಾಗಿ ಸಂಜಯ್ ನಿರುಪಮ್, ಅವರ ಕುಟುಂಬ ಮತ್ತು ಅವರ ಹಿತೈಷಿಗಳಿಗೆ ಉಂಟಾದ ನೋವು ಮತ್ತು ಸಂಕಟವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ, ನನ್ನ ಇಂತಹ ಹೇಳಿಕೆಗಳಿಂದ ಉಂಟಾದ ನೋವಿಗೆ ನನ್ನ ಬೇಷರತ್ ಕ್ಷಮೆಯನ್ನು ಸಂಜಯ್ ನಿರುಪಮ್, ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅವರ ಹಿತೈಷಿಗಳೊಂದಿಗೆ ಕೇಳುತ್ತಿದ್ದೇನೆ….ಸಂಜಯ್ ನಿರುಪಮ್ ಅವರು ನನ್ನ ಬೇಷರತ್ ಕ್ಷಮೆಯನ್ನು ಪರಿಗಣಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಿನೋದ್ ರಾಯ್ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...