Homeಮುಖಪುಟ2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

- Advertisement -
- Advertisement -

2ಜಿ ತರಂಗಾಂತರ (2G Spectrum) ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಸಂಜಯ್ ನಿರುಪಮ್ ಅವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಏಳು ವರ್ಷಗಳ ನಂತರ, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರಾಯ್ ಅವರು ಸಂಜಯ್ ನಿರುಪಮ್ ಅವರಿಗೆ “ಬೇಷರತ್ ಕ್ಷಮೆಯಾಚನೆ” ಯನ್ನು ಮಾಡಿದ್ದಾರೆ.

2014 ರಲ್ಲಿ, ವಿನೋದ್ ರಾಯ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 2G ತರಂಗಾಂತರ ಹಂಚಿಕೆ ಪ್ರಕರಣದ ವರದಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೊರಗಿಡುವಂತೆ ಒತ್ತಡ ಹೇರಿದ ಸಂಸದರಲ್ಲಿ ಸಂಜಯ್‌ ನಿರುಪಮ್ ಕೂಡಾ ಒಬ್ಬರು ಎಂದು  ಹೇಳಿದ್ದರು. ವಿನೋದ್‌ ರೈ ಅವರ 2014 ರ ಪುಸ್ತಕ, Not Just an Accountant: The Diary of the Nation’s Conscience Keeper ಬಿಡುಗಡೆಯ ಸಮಯದಲ್ಲಿ ಈ ಸಂದರ್ಶನವನ್ನು ಪ್ರಸಾರ ಮಾಡಲಾಯಿತು ಮತ್ತು ಮಾಧ್ಯಮಗಳಲ್ಲಿ ಅವರ ಹೇಳಿಕೆಯನ್ನು ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ವಿನೋದ್ ರಾಯ್ ಅವರ ಬೇಷರತ್ತಾದ ಕ್ಷಮೆಯಾಚನೆಯ ಕುರಿತು ಪ್ರತಿಕ್ರಿಯಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಜಯ್‌ ನಿರುಪಮ್, ಇದನ್ನು “ಸುವರ್ಣ ದಿನ” ಎಂದು ಬಣ್ಣಿಸಿದ್ದಾರೆ.

“ಆ ಸಮಯದಲ್ಲಿ ಅವರ ತಪ್ಪು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ನಾನು ಮಾಜಿ ಸಿಎಜಿಯನ್ನು ಒತ್ತಾಯಿಸಿದ್ದೆ. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ಹಾಗಾಗಿ ನಾನು ಹೊಸದಿಲ್ಲಿಯ ಪಟಿಯಾಲ ಹೌಸ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ವಿನೋದ್‌ ರೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ ಅವರು ಕಲ್ಲಿದ್ದಲು ಬ್ಲಾಕ್ ಮತ್ತು 2ಜಿ ತರಂಗಾಂತರ ಹಂಚಿಕೆ ಪ್ರಕರಣಗಳ ಕುರಿತ ವಿನೋದ್ ರಾಯ್ ಅವರ ವರದಿಯು ‘ಸಂಪೂರ್ಣ ನಕಲಿ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

“ಇದನ್ನು ನ್ಯಾಯಾಲಯ ಹೇಳಿಲ್ಲ. ಆದರೆ, 2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಅವರು ಸಿದ್ಧಪಡಿಸಿದ ವರದಿಯು ಅಸಂಬದ್ಧವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ… 2ಜಿ ವರದಿಯ ಪ್ರಕರಣದ, ಏಳು ವರ್ಷಗಳ ವಿಚಾರಣೆಯ ನಂತರ ಕೂಡಾ, ಆಪಾದಿತ ಹಗರಣದ ಬಗ್ಗೆ ಸಿಬಿಐ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವರದಿ ನಕಲಿಯಾಗಿತ್ತು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವರದಿಯೂ ನಕಲಿ. ಈ ನಕಲಿ ವರದಿಗಳಿಗೂ ವಿನೋದ್ ರಾಯ್ ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು” ಎಂದು ಸಂಜಯ್ ನಿರುಪಮ್‌ ಹೇಳಿದ್ದಾರೆ.

ನೋಟರಿ ಮಾಡಿದ ಅಫಿಡವಿತ್

ವಿನೋದ್ ರಾಯ್ ಅವರು ಮಾಡಿರುವ ನೋಟರಿ ಅಫಿಡವಿಟ್‌ನ ಪ್ರತಿಯೊಂದನ್ನು ಟ್ವೀಟ್ ಮಾಡಿರುವ ಸಂಜಯ್ ನಿರುಪಮ್‌, “ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಮಾಡಿದ 2ಜಿ ಮತ್ತು ಕಲ್ಲಿದ್ದಲು ನಿಕ್ಷೇಪಗಳ ಬಗ್ಗೆ ಎಲ್ಲಾ ಖೋಟಾ ವರದಿಗಳಿಗಾಗಿ ವಿನೋದ್‌ ರೈ ಅವರು ಈಗ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

ಅಕ್ಟೋಬರ್ 23 ರಂದು ವಿನೋದ್ ರಾಯ್ ಈ ಅಫಿಡವಿತ್‌ ಅನ್ನು ನೋಟರಿ ಮಾಡಿದ್ದರು. ಅದರಲ್ಲಿ, “ಸೆಪ್ಟೆಂಬರ್‌ 14 ರ ತನ್ನ ಪುಸ್ತಕ ಬಿಡುಗಡೆಯ ಸಮಯದಲ್ಲಿ ಸಂಜಯ್ ನಿರುಪಮ್ ವಿರುದ್ದ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಮಾಧ್ಯಮ ಸಂದರ್ಶನಗಳಲ್ಲಿ ಪ್ರಸಾರವಾಗಿದೆ ಮತ್ತು ಟೈಮ್ಸ್ ಆಫ್ ಇಂಡಿಯಾ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಸೇರಿದಂತೆ ಮಾಧ್ಯಮ ಪ್ರಕಟಣೆಗಳಲ್ಲಿ ಪ್ರಕಟಿಸಿದ್ದಾರೆ” ಎಂದು ಒಪ್ಪಿಕೊಂಡಿದ್ದಾರೆ.

“ಸಂದರ್ಶಕರು ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಪ್ರಮಾದಪೂರ್ವಕವಾಗಿ ಮತ್ತು ತಪ್ಪಾಗಿ ಸಂಜಯ್ ನಿರುಪಮ್ ಅವರ ಹೆಸರನ್ನು ಸಂಸದರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದೇನೆ. ಅದು ದೂರದರ್ಶನದಲ್ಲಿ ಪ್ರಸಾರವಾದ ಮತ್ತು ಪ್ರಕಟಿಸಿದ ಹೇಳಿಕೆಗಳು ವಾಸ್ತವವಾಗಿ ತಪ್ಪು” ಎಂದು ವಿನೋದ್ ರಾಯ್ ಹೇಳಿದ್ದಾರೆ.

“ನನ್ನ ಹೇಳಿಕೆಗಳಿಂದಾಗಿ ಸಂಜಯ್ ನಿರುಪಮ್, ಅವರ ಕುಟುಂಬ ಮತ್ತು ಅವರ ಹಿತೈಷಿಗಳಿಗೆ ಉಂಟಾದ ನೋವು ಮತ್ತು ಸಂಕಟವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ, ನನ್ನ ಇಂತಹ ಹೇಳಿಕೆಗಳಿಂದ ಉಂಟಾದ ನೋವಿಗೆ ನನ್ನ ಬೇಷರತ್ ಕ್ಷಮೆಯನ್ನು ಸಂಜಯ್ ನಿರುಪಮ್, ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅವರ ಹಿತೈಷಿಗಳೊಂದಿಗೆ ಕೇಳುತ್ತಿದ್ದೇನೆ….ಸಂಜಯ್ ನಿರುಪಮ್ ಅವರು ನನ್ನ ಬೇಷರತ್ ಕ್ಷಮೆಯನ್ನು ಪರಿಗಣಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಿನೋದ್ ರಾಯ್ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...