Homeಮುಖಪುಟಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

- Advertisement -
- Advertisement -

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೆಗಾಸಸ್ ಕಣ್ಗಾವಲು ಪ್ರಕರಣಕ್ಕೆ ಒಳಗಾದವರ ಹೆಸರನ್ನು ದಿನೇ ದಿನೇ ಬಿಡುಗಡೆ ಮಾಡುತ್ತಿರುವ ದಿ ವೈರ್ ಇಂದು ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ ಕೂಡ ಪೆಗಾಸಸ್ ಪಟ್ಟಿಯಲ್ಲಿದ್ದರು ಎಂಬ ಅಂಶವನ್ನು ಬಹಿರಂಗಪಡಿಸಿದೆ.

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ ಮತ್ತು ಮಾಜಿ ಹೆಚ್ಚುವರಿ ಎಕೆ ಶರ್ಮಾ ಕೂಡ ಕಣ್ಗಾವಲು ಪಟ್ಟಿಯಲ್ಲಿದ್ದಾರೆ ಎಂದು ದಿ ವೈರ್ ಹೇಳಿದೆ. ಈ ಹೆಸರುಗಳು 2018ರ ಸಂದರ್ಭದಲ್ಲಿ ಕಣ್ಗಾವಲು ಪಟ್ಟಿಗೆ ಸೇರಿಸಲಾಗಿದೆ ಎನ್ನಲಾಗಿದೆ.

2018ರ ಅಕ್ಟೋಬರ್‌ನಲ್ಲಿ ಸಿಬಿಐ ಒಳಗೆ ಬಣ ರಾಜಕೀಯ ನಡೆಯುತ್ತಿತ್ತು. ಆಗ ಅಲೋಕ್ ವರ್ಮಾರವರು ರಾಕೇಶ್ ಅಸ್ಥಾನ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಗಿದೆ ಎಂದು ವೈರ್ ತಿಳಿಸಿದೆ. ಆಗ ಅವರಿಬ್ಬರೂ ತಮ್ಮ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಲೋಕ್ ವರ್ಮಾರವರ ಕುಟುಂಬ ಸದಸ್ಯರ ಫೋನ್‌ ನಂಬರ್‌ಗಳನ್ನು ಕೂಡ ಪಟ್ಟಿಗೆ ಸೇರಿಸಲಾಗಿದೆ. ವರ್ಮಾರವರ ಹೆಂಡತಿ, ಮಗಳು, ಅಳಿಯ, ಸೇರಿದಂತೆ ಒಟ್ಟು 8 ಕುಟುಂಬ ಸದಸ್ಯರ ಹೆಸರನ್ನು ಸೇರಿಸಲಾಗಿದೆ. ಕೆಲ ಸಮಯದ ನಂತರ ಈ ಮೊಬೈಲ್ ಸಂಖ್ಯೆಗಳನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಅದೇ ರೀತಿಯಲ್ಲಿ ಅನಿಲ್ ಅಂಬಾನಿ ಮತ್ತು ಅವರ ಉದ್ಯೋಗಿ ಟೋನಿ ಜೆಸುಡಾನ್ ಹಾಗೂ ಫ್ರೆಂಚ್ ಕಂಪನಿ ಡಸಾಲ್ಟ್ ಏವಿಯೇಷನ್‌ನ ಭಾರತದ ಪ್ರತಿನಿಧಿ ವೆಂಕಟ ರಾವ್ ಪೊಸಿನಾ ಅವರ ಸಂಖ್ಯೆಯೂ ಕಣ್ಗಾವಲು ಪಟ್ಟಿ ಸೇರಿದೆ ಎಂದು ವೈರ್ ತಿಳಿಸಿದೆ.

ರಫೇಲ್ ಜೆಟ್‌ಗಳನ್ನು ಖರೀದಿಸಲು ಡಸಾಲ್ಟ್‌ನೊಂದಿಗೆ ಭಾರತ ಸರ್ಕಾರವು ಮಾಡಿಕೊಂಡ ಒಪ್ಪಂದದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಾದ ಕೂಡಲೇ ಅವರ ನಂಬರ್‌ಗಳನ್ನು ಪಟ್ಟಿಗೆ ಸೇರಿಸಲಾಗಿದೆ ಎಂದು ವೈರ್ ಹೇಳಿದೆ. 2018 ರಿಂದ 2019ರವರೆಗೆ ಹಲವು ಉದ್ಯೋಗಿಗಳ ಸಂಖ್ಯೆಗಳನ್ನು ಸೇರಿಸಲಾಗಿದೆ.

ಸಿಬಿಐ ಮಾಜಿ ನಿರ್ದೇಶಕರಾದ ಅಲೋಕ್‌ ವರ್ಮಾರವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಏಕೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...