Homeಮುಖಪುಟಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು.

- Advertisement -
- Advertisement -

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್‌ರವರು ತಮ್ಮ ಶಿಮ್ಲಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಈ ಕುರಿತು ಅಧಿಕೃತ ಬರಹ ನೀಡಿಲ್ಲ. ವಿಧಿವಿಜ್ಞಾನ ತಂಡದಿಂದ ಮಾದರಿಗಳನ್ನು ಸಂಗ್ರಹಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮ್ಲಾದ ಮನೆಯಲ್ಲಿ 69 ವರ್ಷದ ಅಶ್ವನಿ ಕುಮಾರ್‌ರವರು ಬರೆದಿರುವ ಆತ್ಮಹತ್ಯೆ ಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಶ್ವನಿ ಕುಮಾರ್ ನಂತರ ಸಿಬಿಐ ನಿರ್ದೇಶಕರಾಗಿದ್ದ, ಮಾಜಿ ಪೊಲೀಸ್ ಅಧಿಕಾರಿಯಾದ ಎ.ಪಿ ಸಿಂಗ್‌ರವರು “ನಾನು ಅವರೊಂದಿಗೆ ವಿಶೇಷ ನಿರ್ದೇಶಕರಾಗಿ ಹತ್ತಿರದಿಂದ ಕೆಲಸ ಮಾಡಿದ್ದೇನೆ. ಅವರು ಸಂಭಾವಿತ ವ್ಯಕ್ತಿ. ಎಂದಿಗೂ ತನ್ನ ಸಹನೆಯನ್ನು ಕಳೆದುಕೊಳ್ಳುತ್ತಿರಲಿಲ್ಲ. ಅವರ ಸಾವು ಆಘಾತಕಾರಿ” ಎಂದು ತಿಳಿಸಿದ್ದಾರೆ.

ಭಾರತೀಯ ಪೊಲೀಸ್ ಸೇವೆಯ 1973 ರ ಬ್ಯಾಚ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್ ಅವರು 2006 ರಿಂದ 2008 ರವರೆಗೆ ಹಿಮಾಚಲ ಪ್ರದೇಶ ಡಿಜಿಪಿ ಆಗಿದ್ದರು. ನಂತರ ಆಗಸ್ಟ್ 2008 ರಿಂದ ನವೆಂಬರ್ 2010 ರವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಖ್ಯಸ್ಥರಾಗಿದ್ದರು. ಮೂರು ವರ್ಷಗಳ ನಂತರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಅವರನ್ನು ಮಾರ್ಚ್ 2013 ರಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಿತು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಶ್ವನಿ ಕುಮಾರ್ ರಾಜ್ಯವೊಂದರ ರಾಜ್ಯಪಾಲರಾಗಿ ನೇಮಕವಾದ ಮೊದಲ ಮಾಜಿ ಸಿಬಿಐ ಅಧಿಕಾರಿಯಾಗಿದ್ದರು. ಕೆಲವು ತಿಂಗಳುಗಳ ನಂತರ, ಅವರನ್ನು ಡಿಸೆಂಬರ್ 2013 ರವರೆಗೆ ಮಣಿಪುರಕ್ಕೂ ರಾಜ್ಯಪಾಲರಾಗಿ ನೇಮಿಸಲಾಗಿತ್ತು. ಆದರೆ 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆದುಹಾಕಲಾಯಿತು.

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು. ಆಗ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರ್ಕಾರದಲ್ಲಿ ಅಮಿತ್‌ ಶಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿದ್ದರು. ಈ ಪ್ರಕರಣದಲ್ಲಿ ಅಮಿತ್‌ ಶಾ ಸೇರಿದಂತೆ ವಿಚಾರಣೆಯನ್ನು ಎದುರಿಸಿದ 22 ಆರೋಪಿಗಳನ್ನು 2018 ರ ಡಿಸೆಂಬರ್‌ನಲ್ಲಿ ಖುಲಾಸೆಗೊಳಿಸಲಾಗಿದೆ.

ಅಶ್ವನಿ ಕುಮಾರ್ ಅವರು ಹಿಮಾಚಲ ಪ್ರದೇಶದ ಯುವ ಐಪಿಎಸ್ ಅಧಿಕಾರಿಯಾಗಿ 1985 ರಲ್ಲಿ ಶಿಮ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ನಿಯೋಜನೆಯ ಸಮಯದಲ್ಲಿಯೇ ಆಗಿನ ಪ್ರಧಾನಿ ರಾಜೀವ್ ಗಾಂಧಿಯವರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದ ತಂಡದ ಭಾಗವಾಗಿದ್ದರು. ಅವರು 1985 ರಿಂದ 1990 ರವರೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿದ್ದರು. ಈ ಅಧಿಕಾರಾವಧಿಯಲ್ಲಿ ಅವರು ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...