Homeಮುಖಪುಟಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು.

- Advertisement -
- Advertisement -

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್‌ರವರು ತಮ್ಮ ಶಿಮ್ಲಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಈ ಕುರಿತು ಅಧಿಕೃತ ಬರಹ ನೀಡಿಲ್ಲ. ವಿಧಿವಿಜ್ಞಾನ ತಂಡದಿಂದ ಮಾದರಿಗಳನ್ನು ಸಂಗ್ರಹಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮ್ಲಾದ ಮನೆಯಲ್ಲಿ 69 ವರ್ಷದ ಅಶ್ವನಿ ಕುಮಾರ್‌ರವರು ಬರೆದಿರುವ ಆತ್ಮಹತ್ಯೆ ಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಶ್ವನಿ ಕುಮಾರ್ ನಂತರ ಸಿಬಿಐ ನಿರ್ದೇಶಕರಾಗಿದ್ದ, ಮಾಜಿ ಪೊಲೀಸ್ ಅಧಿಕಾರಿಯಾದ ಎ.ಪಿ ಸಿಂಗ್‌ರವರು “ನಾನು ಅವರೊಂದಿಗೆ ವಿಶೇಷ ನಿರ್ದೇಶಕರಾಗಿ ಹತ್ತಿರದಿಂದ ಕೆಲಸ ಮಾಡಿದ್ದೇನೆ. ಅವರು ಸಂಭಾವಿತ ವ್ಯಕ್ತಿ. ಎಂದಿಗೂ ತನ್ನ ಸಹನೆಯನ್ನು ಕಳೆದುಕೊಳ್ಳುತ್ತಿರಲಿಲ್ಲ. ಅವರ ಸಾವು ಆಘಾತಕಾರಿ” ಎಂದು ತಿಳಿಸಿದ್ದಾರೆ.

ಭಾರತೀಯ ಪೊಲೀಸ್ ಸೇವೆಯ 1973 ರ ಬ್ಯಾಚ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್ ಅವರು 2006 ರಿಂದ 2008 ರವರೆಗೆ ಹಿಮಾಚಲ ಪ್ರದೇಶ ಡಿಜಿಪಿ ಆಗಿದ್ದರು. ನಂತರ ಆಗಸ್ಟ್ 2008 ರಿಂದ ನವೆಂಬರ್ 2010 ರವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಖ್ಯಸ್ಥರಾಗಿದ್ದರು. ಮೂರು ವರ್ಷಗಳ ನಂತರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಅವರನ್ನು ಮಾರ್ಚ್ 2013 ರಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಿತು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಶ್ವನಿ ಕುಮಾರ್ ರಾಜ್ಯವೊಂದರ ರಾಜ್ಯಪಾಲರಾಗಿ ನೇಮಕವಾದ ಮೊದಲ ಮಾಜಿ ಸಿಬಿಐ ಅಧಿಕಾರಿಯಾಗಿದ್ದರು. ಕೆಲವು ತಿಂಗಳುಗಳ ನಂತರ, ಅವರನ್ನು ಡಿಸೆಂಬರ್ 2013 ರವರೆಗೆ ಮಣಿಪುರಕ್ಕೂ ರಾಜ್ಯಪಾಲರಾಗಿ ನೇಮಿಸಲಾಗಿತ್ತು. ಆದರೆ 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆದುಹಾಕಲಾಯಿತು.

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು. ಆಗ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರ್ಕಾರದಲ್ಲಿ ಅಮಿತ್‌ ಶಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿದ್ದರು. ಈ ಪ್ರಕರಣದಲ್ಲಿ ಅಮಿತ್‌ ಶಾ ಸೇರಿದಂತೆ ವಿಚಾರಣೆಯನ್ನು ಎದುರಿಸಿದ 22 ಆರೋಪಿಗಳನ್ನು 2018 ರ ಡಿಸೆಂಬರ್‌ನಲ್ಲಿ ಖುಲಾಸೆಗೊಳಿಸಲಾಗಿದೆ.

ಅಶ್ವನಿ ಕುಮಾರ್ ಅವರು ಹಿಮಾಚಲ ಪ್ರದೇಶದ ಯುವ ಐಪಿಎಸ್ ಅಧಿಕಾರಿಯಾಗಿ 1985 ರಲ್ಲಿ ಶಿಮ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ನಿಯೋಜನೆಯ ಸಮಯದಲ್ಲಿಯೇ ಆಗಿನ ಪ್ರಧಾನಿ ರಾಜೀವ್ ಗಾಂಧಿಯವರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದ ತಂಡದ ಭಾಗವಾಗಿದ್ದರು. ಅವರು 1985 ರಿಂದ 1990 ರವರೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿದ್ದರು. ಈ ಅಧಿಕಾರಾವಧಿಯಲ್ಲಿ ಅವರು ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...