Homeಮುಖಪುಟಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು.

- Advertisement -
- Advertisement -

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್‌ರವರು ತಮ್ಮ ಶಿಮ್ಲಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಈ ಕುರಿತು ಅಧಿಕೃತ ಬರಹ ನೀಡಿಲ್ಲ. ವಿಧಿವಿಜ್ಞಾನ ತಂಡದಿಂದ ಮಾದರಿಗಳನ್ನು ಸಂಗ್ರಹಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮ್ಲಾದ ಮನೆಯಲ್ಲಿ 69 ವರ್ಷದ ಅಶ್ವನಿ ಕುಮಾರ್‌ರವರು ಬರೆದಿರುವ ಆತ್ಮಹತ್ಯೆ ಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಶ್ವನಿ ಕುಮಾರ್ ನಂತರ ಸಿಬಿಐ ನಿರ್ದೇಶಕರಾಗಿದ್ದ, ಮಾಜಿ ಪೊಲೀಸ್ ಅಧಿಕಾರಿಯಾದ ಎ.ಪಿ ಸಿಂಗ್‌ರವರು “ನಾನು ಅವರೊಂದಿಗೆ ವಿಶೇಷ ನಿರ್ದೇಶಕರಾಗಿ ಹತ್ತಿರದಿಂದ ಕೆಲಸ ಮಾಡಿದ್ದೇನೆ. ಅವರು ಸಂಭಾವಿತ ವ್ಯಕ್ತಿ. ಎಂದಿಗೂ ತನ್ನ ಸಹನೆಯನ್ನು ಕಳೆದುಕೊಳ್ಳುತ್ತಿರಲಿಲ್ಲ. ಅವರ ಸಾವು ಆಘಾತಕಾರಿ” ಎಂದು ತಿಳಿಸಿದ್ದಾರೆ.

ಭಾರತೀಯ ಪೊಲೀಸ್ ಸೇವೆಯ 1973 ರ ಬ್ಯಾಚ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್ ಅವರು 2006 ರಿಂದ 2008 ರವರೆಗೆ ಹಿಮಾಚಲ ಪ್ರದೇಶ ಡಿಜಿಪಿ ಆಗಿದ್ದರು. ನಂತರ ಆಗಸ್ಟ್ 2008 ರಿಂದ ನವೆಂಬರ್ 2010 ರವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಖ್ಯಸ್ಥರಾಗಿದ್ದರು. ಮೂರು ವರ್ಷಗಳ ನಂತರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಅವರನ್ನು ಮಾರ್ಚ್ 2013 ರಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಿತು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಶ್ವನಿ ಕುಮಾರ್ ರಾಜ್ಯವೊಂದರ ರಾಜ್ಯಪಾಲರಾಗಿ ನೇಮಕವಾದ ಮೊದಲ ಮಾಜಿ ಸಿಬಿಐ ಅಧಿಕಾರಿಯಾಗಿದ್ದರು. ಕೆಲವು ತಿಂಗಳುಗಳ ನಂತರ, ಅವರನ್ನು ಡಿಸೆಂಬರ್ 2013 ರವರೆಗೆ ಮಣಿಪುರಕ್ಕೂ ರಾಜ್ಯಪಾಲರಾಗಿ ನೇಮಿಸಲಾಗಿತ್ತು. ಆದರೆ 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆದುಹಾಕಲಾಯಿತು.

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು. ಆಗ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರ್ಕಾರದಲ್ಲಿ ಅಮಿತ್‌ ಶಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿದ್ದರು. ಈ ಪ್ರಕರಣದಲ್ಲಿ ಅಮಿತ್‌ ಶಾ ಸೇರಿದಂತೆ ವಿಚಾರಣೆಯನ್ನು ಎದುರಿಸಿದ 22 ಆರೋಪಿಗಳನ್ನು 2018 ರ ಡಿಸೆಂಬರ್‌ನಲ್ಲಿ ಖುಲಾಸೆಗೊಳಿಸಲಾಗಿದೆ.

ಅಶ್ವನಿ ಕುಮಾರ್ ಅವರು ಹಿಮಾಚಲ ಪ್ರದೇಶದ ಯುವ ಐಪಿಎಸ್ ಅಧಿಕಾರಿಯಾಗಿ 1985 ರಲ್ಲಿ ಶಿಮ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ನಿಯೋಜನೆಯ ಸಮಯದಲ್ಲಿಯೇ ಆಗಿನ ಪ್ರಧಾನಿ ರಾಜೀವ್ ಗಾಂಧಿಯವರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದ ತಂಡದ ಭಾಗವಾಗಿದ್ದರು. ಅವರು 1985 ರಿಂದ 1990 ರವರೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿದ್ದರು. ಈ ಅಧಿಕಾರಾವಧಿಯಲ್ಲಿ ಅವರು ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...