Homeಕರ್ನಾಟಕಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಅತ್ಯಂತ ಹಿಂದುಳಿದ ಈಡಿಗ ಸಮುದಾಯದವರಾದ ಜಾಲಪ್ಪ ಅವರು ಒಕ್ಕಲಿಗ ಸಮುದಾಯದ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ನಿರಂತರ ಗೆಲವು ಸಾಧಿಸಿದ ಜನಪ್ರತಿನಿಧಿಯಾಗಿದ್ದರು.

- Advertisement -
- Advertisement -

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ಅವರು ಶುಕ್ರವಾರ ನಿಧನರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು. ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರ್‌.ಎಲ್‌.ಜಾಲಪ್ಪ ಅವರು 19, ಅಕ್ಟೋಬರ್‌ 1925ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಜನಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದರು.

ಒಂದಿಷ್ಟು ವಯಸ್ಸಾದ ಮೇಲೆ ರಾಜಕಾರಣಕ್ಕೆ ಬಂದವರು ಜಾಲಪ್ಪ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ಎಂಎಲ್‌ಎ ಆಗಿ ಆಯ್ಕೆಯಾಗಿ ಸಂಚಲನ ಮೂಡಿಸಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಸೋಲು ಕಂಡಿದ್ದರು.

ಜಾಲಪ್ಪ ಅವರು ಈಡಿಗ ಸಮುದಾಯಕ್ಕೆ ಸೇರಿದವರು. ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ನಂತರ ಶಾಸಕರಾಗಿ ಗೆದ್ದರು. ದೇವರಾಜ ಅರಸು ಅವರಿಗೆ ಆಪ್ತರಾಗಿದ್ದರು. ಅರಸು ಅವರ ಜೊತೆಯಲ್ಲಿ ಮೊದಲು ಕಾಂಗ್ರೆಸ್‌ನಲ್ಲಿದ್ದರು. ನಂತರ ಅರಸು ಅವರು ಕರ್ನಾಟಕ ಕ್ರಾಂತಿ ರಂಗ ಪಕ್ಷ ಕಟ್ಟಿದಾಗ ಜಾಲಪ್ಪ ಅವರೂ ಕ್ರಾಂತಿರಂಗ ಸೇರಿದರು. ಕ್ರಾಂತಿರಂಗ ಜನತಾ ಪಾರ್ಟಿಯೊಂದಿಗೆ ವಿಲೀನವಾಯಿತು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಾಲಪ್ಪ ಅವರು ಒಮ್ಮೆಯೂ ಸೋಲಲಿಲ್ಲ. ಇಂದಿರಾಗಾಂಧಿಯವರ ಕೊಲೆಯಾದ ಮೇಲೆ ನಡೆದ 1985ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾತ್ರ ಸೋಲು ಕಂಡರು. 1996ರಲ್ಲಿ ಮತ್ತೆ ಲೋಕಸಭಾ ಚುನಾವಣೆಗೆ ನಿಂತು ಗೆದ್ದರು. ಸತತ ನಾಲ್ಕು ಬಾರಿ ಲೋಕಸಭೆಗೆ ಪುನರಾಯ್ಕೆಯಾದರು. ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಜೆ.ಜೆ.ಪಾಟೇಲ್‌, ಎಸ್.ಆರ್‌.ಬೊಮ್ಮಾಯಿ ಅವರ ನಂತರದ ಸ್ಥಾನದಲ್ಲಿ ಜಾಲಪ್ಪ ಅವರ ಹೆಸರಿತ್ತು.

ಕೊಲೆ ಆಪಾದನೆ; ರಾಜಕೀಯ ಹಿನ್ನೆಡೆ

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಜಾಲಪ್ಪ ಅವರು ಗೃಹ ಸಚಿವರಾಗಿದ್ದರು. ಈ ಅವಧಿಯಲ್ಲಿ ರಶೀದ್ ಎಂಬ ವಕೀಲರ ಕೊಲೆಯಾಯಿತು. ಜಾಲಪ್ಪ ಅವರ ಸೂಚನೆ ಮೇರೆಗೆ ಕೊಲೆಯಾಗಿದೆ ಎಂದು ಸುದ್ದಿಯಾಯಿತು. ಆಗ ಇವರು ರಾಜೀನಾಮೆ ಕೊಡಬೇಕಾಗಿ ಬಂತು. ಸಿಬಿಐ ಅರೆಸ್ಟ್ ಮಾಡಿತ್ತು. ಈ ಕಾರಣದಿಂದಾಗಿ ಒಂದಿಷ್ಟು ಕಾಲ ಜಾಲಪ್ಪ ಅವರ ವರ್ಚಸ್ಸು ಕುಗ್ಗಿತು.

ಹಿಂದುಳಿದ ಜಾತಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮೆಡಿಕಲ್‌ ಕಾಲೇಜುಗಳನ್ನು ಈ ಸಮುದಾಯಗಳಿಗೆ ನೀಡಿದ್ದರು. ದೇವರಾಜ ಅರಸು ಹಿಂದುಳಿದ ವರ್ಗಗಳ ಟ್ರಸ್ಟ್‌ ರಚಿಸಿ, ಆ ಟ್ರಸ್ಟ್‌ಗೆ ಒಂದು ಮೆಡಿಕಲ್ ಕಾಲೇಜು ನೀಡಿದರು. ಈ ಟ್ರಸ್ಟ್‌ ವಿಚಾರದಲ್ಲೇ ವಿವಾದ ಉಂಟಾಗಿ ವಕೀಲ ರಶೀದ್‌ ಅವರ ಕೊಲೆಯಾಯಿತು ಎನ್ನಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜೀನಾಮೆ ನೀಡಿದ್ದರು

ಜಾಲಪ್ಪ ಅವರು ಲೋಕಸಭೆಗೆ ಆಯ್ಕೆಯಾದ ಅವಧಿಯಲ್ಲೇ ದೇವೇಗೌಡರು ಪ್ರಧಾನಿಯಾದರು. ಈ ಅವಧಿಯಲ್ಲಿ ಜಾಲಪ್ಪ ಜವಳಿ ಖಾತೆಯ ರಾಜ್ಯ ಸಚಿವರನ್ನಾಗಿ ಮಾಡಿದರು. ಸೀನಿಯರ್‌ ಆಗಿದ್ದರಿಂದ ಸಂಪುಟ ದರ್ಜೆಯಲ್ಲಿ ಸಚಿವನಾಗುತ್ತೇನೆ ಎಂದು ಜಾಲಪ್ಪ ಭಾವಿಸಿದ್ದರು. ಆದರೆ ರಾಜ್ಯ ಖಾತೆ ಸ್ಥಾನಮಾನ ಸಿಕ್ಕಿತ್ತು. ಬೇರೆ ದಾರಿ ಇಲ್ಲದೇ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸಿ ಕೆಳಗೆ ಇಳಿದು ಬಂದವರೇ ದೇವೇಗೌಡರಿಗೆ ರಾಜೀನಾಮೆ ನೀಡಿದ್ದರು. ದೇವೇಗೌಡರು ಎರಡು ದಿನಗಳ ನಂತರ ಜಾಲಪ್ಪ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ಮಾಡಿದರು. ಮುಂದೆ ಜನತಾದಳ ಬಿಟ್ಟು ಕಾಂಗ್ರೆಸ್‌ ಸೇರಿದರು.

ಒಕ್ಕಲಿಗರ ಪ್ರಾಬಲ್ಯ ಕ್ಷೇತ್ರದಲ್ಲಿ ಬೆಳೆದ ಈಡಿಗ ನಾಯಕ

ಚುನಾವಣೆಯಲ್ಲಿ ಜಾತಿ ಪ್ರಾಬಲ್ಯ ಅಗತ್ಯ. ಜಾಲಪ್ಪ ಅವರ ವಿಶೇಷವೇನೆಂದರೆ ಒಕ್ಕಲಿಗ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬಂದ ಈಡಿಗ ಸಮುದಾಯದ ವ್ಯಕ್ತಿಯಾಗಿದ್ದರು. ಕರಾವಳಿ ಭಾಗದಲ್ಲಾದರೆ ಈಡಿಗರು ಪ್ರಾಬಲ್ಯ ಹೊಂದಿದ್ದಾರೆ. ಆದರೆ ದೊಡ್ಡಬಳ್ಳಾಪುರ ಭಾಗದಲ್ಲಿ ಈಡಿಗರ ಸಂಖ್ಯೆ ತೀರಾ ಕಡಿಮೆ. ತುಂಬಾ ಹಿಂದುಳಿದ ಸಮಾಜದಿಂದ ಬಂದು, ಎಲ್ಲರನ್ನೂ ಎದುರಿಸಿ ನಿಂತು ರಾಜಕಾರಣ ಮಾಡಿದ ವ್ಯಕ್ತಿ ಜಾಲಪ್ಪ.

ಅಹಿಂದದಲ್ಲಿ ಮುಂಚೂಣಿ

ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಶುರುವಾಗಿ ಮೊದಲ ಸಮ್ಮೇಳನ ಕೋಲಾರದಲ್ಲಿ ನಡೆಯಿತು. ಈ ಸಮ್ಮೇಳನದ ಉದ್ಘಾಟನೆ ಮಾಡಿದ್ದು ಸಿದ್ದರಾಮಯ್ಯನವರಾದರೆ, ಅಧ್ಯಕ್ಷತೆ ವಹಿಸಿದ್ದು ಜಾಲಪ್ಪ. ಅಹಿಂದ ವಿಚಾರದಲ್ಲಿ ಕಡೆಯವರೆಗೂ ಜಾಲಪ್ಪ ಅವರಿಗೆ ನಿಷ್ಠೆ, ಒಲವು ಇತ್ತು.

ಜಾಲಪ್ಪ ಅವರಿಗೆ ಹಿಂದುಳಿದ ವರ್ಗಗಳ ಪರ ಒಲವಿತ್ತು. ಸಿದ್ದರಾಮಯ್ಯನವರು ಸಿಎಂ ಆಗಬೇಕೆಂಬುದು ಅವರ ಆಸೆಯಾಗಿತ್ತು. ಜಾಲಪ್ಪ ಅವರು ರಾಜಕಾರಣದಲ್ಲಿ ಶುದ್ಧ ಹಸ್ತರೆಂದು ಹೇಳಲಾಗದಿದ್ದರೂ ಕೋಟಿ ಕೋಟಿ ಸಂಪಾದಿಸಿದ ವ್ಯಕ್ತಿಯೇನೂ ಆಗಿರಲಿಲ್ಲ. ಮುಖ್ಯವಾಹಿನಿ ರಾಜಕಾರಣದಲ್ಲಿ ಇತರರಿಗಿಂತ ಭಿನ್ನವಾಗಿದ್ದರು ಜಾಲಪ್ಪ.

ಸಿದ್ದರಾಮಯ್ಯ, ಬೊಮ್ಮಾಯಿ ಸಂತಾಪ

ಜಾಲಪ್ಪ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಇವರ‌ ಸಾವಿನಿಂದ ನನ್ನ‌ ಕುಟುಂಬದ ಸದಸ್ಯನಂತಿದ್ದ, ನನ್ನ ಹಿತೈಷಿ ಮತ್ತು‌ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ದು:ಖದಲ್ಲಿ‌ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಆರ್ ಎಲ್ ಜಾಲಪ್ಪ ಅವರು ರಾಜ್ಯ ರಾಜಕಾರಣದ ಹಿರಿಯ ಮುಖಂಡರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಮುಖಿ ಕೆಲಸ ಮಾಡಿದ್ದರು. ಜಾಲಪ್ಪ ಅವರ ನಿಧನದಿಂದ ರಾಜ್ಯದ ಸಾತ್ವಿಕ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...