Homeಕರ್ನಾಟಕಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಅತ್ಯಂತ ಹಿಂದುಳಿದ ಈಡಿಗ ಸಮುದಾಯದವರಾದ ಜಾಲಪ್ಪ ಅವರು ಒಕ್ಕಲಿಗ ಸಮುದಾಯದ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ನಿರಂತರ ಗೆಲವು ಸಾಧಿಸಿದ ಜನಪ್ರತಿನಿಧಿಯಾಗಿದ್ದರು.

- Advertisement -
- Advertisement -

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ಅವರು ಶುಕ್ರವಾರ ನಿಧನರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು. ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರ್‌.ಎಲ್‌.ಜಾಲಪ್ಪ ಅವರು 19, ಅಕ್ಟೋಬರ್‌ 1925ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಜನಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದರು.

ಒಂದಿಷ್ಟು ವಯಸ್ಸಾದ ಮೇಲೆ ರಾಜಕಾರಣಕ್ಕೆ ಬಂದವರು ಜಾಲಪ್ಪ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ಎಂಎಲ್‌ಎ ಆಗಿ ಆಯ್ಕೆಯಾಗಿ ಸಂಚಲನ ಮೂಡಿಸಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಸೋಲು ಕಂಡಿದ್ದರು.

ಜಾಲಪ್ಪ ಅವರು ಈಡಿಗ ಸಮುದಾಯಕ್ಕೆ ಸೇರಿದವರು. ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ನಂತರ ಶಾಸಕರಾಗಿ ಗೆದ್ದರು. ದೇವರಾಜ ಅರಸು ಅವರಿಗೆ ಆಪ್ತರಾಗಿದ್ದರು. ಅರಸು ಅವರ ಜೊತೆಯಲ್ಲಿ ಮೊದಲು ಕಾಂಗ್ರೆಸ್‌ನಲ್ಲಿದ್ದರು. ನಂತರ ಅರಸು ಅವರು ಕರ್ನಾಟಕ ಕ್ರಾಂತಿ ರಂಗ ಪಕ್ಷ ಕಟ್ಟಿದಾಗ ಜಾಲಪ್ಪ ಅವರೂ ಕ್ರಾಂತಿರಂಗ ಸೇರಿದರು. ಕ್ರಾಂತಿರಂಗ ಜನತಾ ಪಾರ್ಟಿಯೊಂದಿಗೆ ವಿಲೀನವಾಯಿತು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಾಲಪ್ಪ ಅವರು ಒಮ್ಮೆಯೂ ಸೋಲಲಿಲ್ಲ. ಇಂದಿರಾಗಾಂಧಿಯವರ ಕೊಲೆಯಾದ ಮೇಲೆ ನಡೆದ 1985ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾತ್ರ ಸೋಲು ಕಂಡರು. 1996ರಲ್ಲಿ ಮತ್ತೆ ಲೋಕಸಭಾ ಚುನಾವಣೆಗೆ ನಿಂತು ಗೆದ್ದರು. ಸತತ ನಾಲ್ಕು ಬಾರಿ ಲೋಕಸಭೆಗೆ ಪುನರಾಯ್ಕೆಯಾದರು. ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಜೆ.ಜೆ.ಪಾಟೇಲ್‌, ಎಸ್.ಆರ್‌.ಬೊಮ್ಮಾಯಿ ಅವರ ನಂತರದ ಸ್ಥಾನದಲ್ಲಿ ಜಾಲಪ್ಪ ಅವರ ಹೆಸರಿತ್ತು.

ಕೊಲೆ ಆಪಾದನೆ; ರಾಜಕೀಯ ಹಿನ್ನೆಡೆ

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಜಾಲಪ್ಪ ಅವರು ಗೃಹ ಸಚಿವರಾಗಿದ್ದರು. ಈ ಅವಧಿಯಲ್ಲಿ ರಶೀದ್ ಎಂಬ ವಕೀಲರ ಕೊಲೆಯಾಯಿತು. ಜಾಲಪ್ಪ ಅವರ ಸೂಚನೆ ಮೇರೆಗೆ ಕೊಲೆಯಾಗಿದೆ ಎಂದು ಸುದ್ದಿಯಾಯಿತು. ಆಗ ಇವರು ರಾಜೀನಾಮೆ ಕೊಡಬೇಕಾಗಿ ಬಂತು. ಸಿಬಿಐ ಅರೆಸ್ಟ್ ಮಾಡಿತ್ತು. ಈ ಕಾರಣದಿಂದಾಗಿ ಒಂದಿಷ್ಟು ಕಾಲ ಜಾಲಪ್ಪ ಅವರ ವರ್ಚಸ್ಸು ಕುಗ್ಗಿತು.

ಹಿಂದುಳಿದ ಜಾತಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮೆಡಿಕಲ್‌ ಕಾಲೇಜುಗಳನ್ನು ಈ ಸಮುದಾಯಗಳಿಗೆ ನೀಡಿದ್ದರು. ದೇವರಾಜ ಅರಸು ಹಿಂದುಳಿದ ವರ್ಗಗಳ ಟ್ರಸ್ಟ್‌ ರಚಿಸಿ, ಆ ಟ್ರಸ್ಟ್‌ಗೆ ಒಂದು ಮೆಡಿಕಲ್ ಕಾಲೇಜು ನೀಡಿದರು. ಈ ಟ್ರಸ್ಟ್‌ ವಿಚಾರದಲ್ಲೇ ವಿವಾದ ಉಂಟಾಗಿ ವಕೀಲ ರಶೀದ್‌ ಅವರ ಕೊಲೆಯಾಯಿತು ಎನ್ನಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜೀನಾಮೆ ನೀಡಿದ್ದರು

ಜಾಲಪ್ಪ ಅವರು ಲೋಕಸಭೆಗೆ ಆಯ್ಕೆಯಾದ ಅವಧಿಯಲ್ಲೇ ದೇವೇಗೌಡರು ಪ್ರಧಾನಿಯಾದರು. ಈ ಅವಧಿಯಲ್ಲಿ ಜಾಲಪ್ಪ ಜವಳಿ ಖಾತೆಯ ರಾಜ್ಯ ಸಚಿವರನ್ನಾಗಿ ಮಾಡಿದರು. ಸೀನಿಯರ್‌ ಆಗಿದ್ದರಿಂದ ಸಂಪುಟ ದರ್ಜೆಯಲ್ಲಿ ಸಚಿವನಾಗುತ್ತೇನೆ ಎಂದು ಜಾಲಪ್ಪ ಭಾವಿಸಿದ್ದರು. ಆದರೆ ರಾಜ್ಯ ಖಾತೆ ಸ್ಥಾನಮಾನ ಸಿಕ್ಕಿತ್ತು. ಬೇರೆ ದಾರಿ ಇಲ್ಲದೇ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸಿ ಕೆಳಗೆ ಇಳಿದು ಬಂದವರೇ ದೇವೇಗೌಡರಿಗೆ ರಾಜೀನಾಮೆ ನೀಡಿದ್ದರು. ದೇವೇಗೌಡರು ಎರಡು ದಿನಗಳ ನಂತರ ಜಾಲಪ್ಪ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ಮಾಡಿದರು. ಮುಂದೆ ಜನತಾದಳ ಬಿಟ್ಟು ಕಾಂಗ್ರೆಸ್‌ ಸೇರಿದರು.

ಒಕ್ಕಲಿಗರ ಪ್ರಾಬಲ್ಯ ಕ್ಷೇತ್ರದಲ್ಲಿ ಬೆಳೆದ ಈಡಿಗ ನಾಯಕ

ಚುನಾವಣೆಯಲ್ಲಿ ಜಾತಿ ಪ್ರಾಬಲ್ಯ ಅಗತ್ಯ. ಜಾಲಪ್ಪ ಅವರ ವಿಶೇಷವೇನೆಂದರೆ ಒಕ್ಕಲಿಗ ಪ್ರಾಬಲ್ಯವಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬಂದ ಈಡಿಗ ಸಮುದಾಯದ ವ್ಯಕ್ತಿಯಾಗಿದ್ದರು. ಕರಾವಳಿ ಭಾಗದಲ್ಲಾದರೆ ಈಡಿಗರು ಪ್ರಾಬಲ್ಯ ಹೊಂದಿದ್ದಾರೆ. ಆದರೆ ದೊಡ್ಡಬಳ್ಳಾಪುರ ಭಾಗದಲ್ಲಿ ಈಡಿಗರ ಸಂಖ್ಯೆ ತೀರಾ ಕಡಿಮೆ. ತುಂಬಾ ಹಿಂದುಳಿದ ಸಮಾಜದಿಂದ ಬಂದು, ಎಲ್ಲರನ್ನೂ ಎದುರಿಸಿ ನಿಂತು ರಾಜಕಾರಣ ಮಾಡಿದ ವ್ಯಕ್ತಿ ಜಾಲಪ್ಪ.

ಅಹಿಂದದಲ್ಲಿ ಮುಂಚೂಣಿ

ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಶುರುವಾಗಿ ಮೊದಲ ಸಮ್ಮೇಳನ ಕೋಲಾರದಲ್ಲಿ ನಡೆಯಿತು. ಈ ಸಮ್ಮೇಳನದ ಉದ್ಘಾಟನೆ ಮಾಡಿದ್ದು ಸಿದ್ದರಾಮಯ್ಯನವರಾದರೆ, ಅಧ್ಯಕ್ಷತೆ ವಹಿಸಿದ್ದು ಜಾಲಪ್ಪ. ಅಹಿಂದ ವಿಚಾರದಲ್ಲಿ ಕಡೆಯವರೆಗೂ ಜಾಲಪ್ಪ ಅವರಿಗೆ ನಿಷ್ಠೆ, ಒಲವು ಇತ್ತು.

ಜಾಲಪ್ಪ ಅವರಿಗೆ ಹಿಂದುಳಿದ ವರ್ಗಗಳ ಪರ ಒಲವಿತ್ತು. ಸಿದ್ದರಾಮಯ್ಯನವರು ಸಿಎಂ ಆಗಬೇಕೆಂಬುದು ಅವರ ಆಸೆಯಾಗಿತ್ತು. ಜಾಲಪ್ಪ ಅವರು ರಾಜಕಾರಣದಲ್ಲಿ ಶುದ್ಧ ಹಸ್ತರೆಂದು ಹೇಳಲಾಗದಿದ್ದರೂ ಕೋಟಿ ಕೋಟಿ ಸಂಪಾದಿಸಿದ ವ್ಯಕ್ತಿಯೇನೂ ಆಗಿರಲಿಲ್ಲ. ಮುಖ್ಯವಾಹಿನಿ ರಾಜಕಾರಣದಲ್ಲಿ ಇತರರಿಗಿಂತ ಭಿನ್ನವಾಗಿದ್ದರು ಜಾಲಪ್ಪ.

ಸಿದ್ದರಾಮಯ್ಯ, ಬೊಮ್ಮಾಯಿ ಸಂತಾಪ

ಜಾಲಪ್ಪ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಇವರ‌ ಸಾವಿನಿಂದ ನನ್ನ‌ ಕುಟುಂಬದ ಸದಸ್ಯನಂತಿದ್ದ, ನನ್ನ ಹಿತೈಷಿ ಮತ್ತು‌ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ದು:ಖದಲ್ಲಿ‌ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಆರ್ ಎಲ್ ಜಾಲಪ್ಪ ಅವರು ರಾಜ್ಯ ರಾಜಕಾರಣದ ಹಿರಿಯ ಮುಖಂಡರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಮುಖಿ ಕೆಲಸ ಮಾಡಿದ್ದರು. ಜಾಲಪ್ಪ ಅವರ ನಿಧನದಿಂದ ರಾಜ್ಯದ ಸಾತ್ವಿಕ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...