Homeಕರ್ನಾಟಕಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆಗಾರಿಕೆ ನೀಡುವುದಾಗಿ ಖರ್ಗೆ ತಿಳಿಸಿದ್ದಾರೆ

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ, ಪಕ್ಷದ ಬಾವುಟ ನೀಡುವ ಮೂಲಕ ‘ಕೈ’ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಪಕ್ಷದ ಸದಸ್ಯತ್ವದ ಪಡೆಯುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಸ್ವಾಗತ. ಶೆಟ್ಟರ್ ಅವರಿಗೆ ನಮ್ಮ ಪಕ್ಷದ ಸಿದ್ದಾಂತ ಈಗಾಗಲೇ ಗೊತ್ತಿದೆ. ಅವುಗಳನ್ನು ಒಪ್ಪಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ನನಗೆ ಇರುವ ಸಂತೋಷವೆಂದರೆ; ತಮ್ಮ ಸ್ವಾಭಿಮಾನ ಕಾಪಾಡಿಕೊಳ್ಳಲು ಶೆಟ್ಟರ್ ಬಿಜೆಪಿ ತೊರೆದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

“ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ. ಶೆಟ್ಟರ್ ಜೊತೆಗೆ ಅಭಯ್ ಸಿಂಗ್ ಕೈ ಹಿಡಿಯುತ್ತಿದ್ದಾರೆ. ನಾನು 35 ವರ್ಷ ರಾಜ್ಯದಲ್ಲಿ ರಾಜಕಾರಣ ಮಾಡಿರುವೆ. ಒಮ್ಮೆಯೂ ಶೆಟ್ಟರ್ ಜೊತೆಗೆ ಜಗಳವಾಡಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

“ಶೆಟ್ಟರ್ ಯಾವುದೇ ವಿವಾದ ಇಲ್ಲದೆ ಕೆಲಸ ಮಾಡಿಕೊಂಡಿದ್ದಾರೆ ಬಂದಿದ್ದಾರೆ. ಇವರು ನೇರ ಮಾತಿನ ರಾಜಕಾರಣಿ. ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆ ನೀಡುತ್ತೇವೆ” ಎಂದಿದ್ದಾರೆ.

ಎಂ ಬಿ ಪಾಟೀಲ್ ಅವರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕೆಪಿಸಿಸಿ ಕಚೇರಿಗೆ ಬಂದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಅವರು ಹಾಜರಿದ್ದರು.

ಹುಬ್ಬಳಿ – ಧಾರವಾಡ ಸೆಂಟ್ರಲ್ ಸೀಟು ಹಂಚಿಕೆ ವಿಚಾರವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ನಾಯಕರು ಶೆಟ್ಟರ್‌ ಮನವೊಲಿಕೆ ಯತ್ನಿಸಿ ವಿಫಲವಾಗಿದ್ದಾರೆ.

ಆದರೆ, ಬಿಜೆಪಿ ನಾಯಕರ ಮನವೊಲಿಕೆ ಮತ್ತು ಆಫರ್‌ಗಳನ್ನು ತಿರಸ್ಕರಿಸಿರುವ ಜಗದೀಶ್ ಶೆಟ್ಟರ್ ಪಕ್ಷದ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಬಿಜೆಪಿ ತೊರೆಯುವ ಶೆಟ್ಟರ್‌ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿರೋಧಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶೆಟ್ಟರ್‌, ”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನಿಸಿದ್ದರು.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...