Homeಕರ್ನಾಟಕಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆಗಾರಿಕೆ ನೀಡುವುದಾಗಿ ಖರ್ಗೆ ತಿಳಿಸಿದ್ದಾರೆ

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ, ಪಕ್ಷದ ಬಾವುಟ ನೀಡುವ ಮೂಲಕ ‘ಕೈ’ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಪಕ್ಷದ ಸದಸ್ಯತ್ವದ ಪಡೆಯುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಸ್ವಾಗತ. ಶೆಟ್ಟರ್ ಅವರಿಗೆ ನಮ್ಮ ಪಕ್ಷದ ಸಿದ್ದಾಂತ ಈಗಾಗಲೇ ಗೊತ್ತಿದೆ. ಅವುಗಳನ್ನು ಒಪ್ಪಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ನನಗೆ ಇರುವ ಸಂತೋಷವೆಂದರೆ; ತಮ್ಮ ಸ್ವಾಭಿಮಾನ ಕಾಪಾಡಿಕೊಳ್ಳಲು ಶೆಟ್ಟರ್ ಬಿಜೆಪಿ ತೊರೆದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

“ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ. ಶೆಟ್ಟರ್ ಜೊತೆಗೆ ಅಭಯ್ ಸಿಂಗ್ ಕೈ ಹಿಡಿಯುತ್ತಿದ್ದಾರೆ. ನಾನು 35 ವರ್ಷ ರಾಜ್ಯದಲ್ಲಿ ರಾಜಕಾರಣ ಮಾಡಿರುವೆ. ಒಮ್ಮೆಯೂ ಶೆಟ್ಟರ್ ಜೊತೆಗೆ ಜಗಳವಾಡಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

“ಶೆಟ್ಟರ್ ಯಾವುದೇ ವಿವಾದ ಇಲ್ಲದೆ ಕೆಲಸ ಮಾಡಿಕೊಂಡಿದ್ದಾರೆ ಬಂದಿದ್ದಾರೆ. ಇವರು ನೇರ ಮಾತಿನ ರಾಜಕಾರಣಿ. ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆ ನೀಡುತ್ತೇವೆ” ಎಂದಿದ್ದಾರೆ.

ಎಂ ಬಿ ಪಾಟೀಲ್ ಅವರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕೆಪಿಸಿಸಿ ಕಚೇರಿಗೆ ಬಂದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಅವರು ಹಾಜರಿದ್ದರು.

ಹುಬ್ಬಳಿ – ಧಾರವಾಡ ಸೆಂಟ್ರಲ್ ಸೀಟು ಹಂಚಿಕೆ ವಿಚಾರವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ನಾಯಕರು ಶೆಟ್ಟರ್‌ ಮನವೊಲಿಕೆ ಯತ್ನಿಸಿ ವಿಫಲವಾಗಿದ್ದಾರೆ.

ಆದರೆ, ಬಿಜೆಪಿ ನಾಯಕರ ಮನವೊಲಿಕೆ ಮತ್ತು ಆಫರ್‌ಗಳನ್ನು ತಿರಸ್ಕರಿಸಿರುವ ಜಗದೀಶ್ ಶೆಟ್ಟರ್ ಪಕ್ಷದ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಬಿಜೆಪಿ ತೊರೆಯುವ ಶೆಟ್ಟರ್‌ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿರೋಧಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶೆಟ್ಟರ್‌, ”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನಿಸಿದ್ದರು.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...