Homeಕರ್ನಾಟಕಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆಗಾರಿಕೆ ನೀಡುವುದಾಗಿ ಖರ್ಗೆ ತಿಳಿಸಿದ್ದಾರೆ

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ, ಪಕ್ಷದ ಬಾವುಟ ನೀಡುವ ಮೂಲಕ ‘ಕೈ’ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಪಕ್ಷದ ಸದಸ್ಯತ್ವದ ಪಡೆಯುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಸ್ವಾಗತ. ಶೆಟ್ಟರ್ ಅವರಿಗೆ ನಮ್ಮ ಪಕ್ಷದ ಸಿದ್ದಾಂತ ಈಗಾಗಲೇ ಗೊತ್ತಿದೆ. ಅವುಗಳನ್ನು ಒಪ್ಪಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ನನಗೆ ಇರುವ ಸಂತೋಷವೆಂದರೆ; ತಮ್ಮ ಸ್ವಾಭಿಮಾನ ಕಾಪಾಡಿಕೊಳ್ಳಲು ಶೆಟ್ಟರ್ ಬಿಜೆಪಿ ತೊರೆದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

“ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ. ಶೆಟ್ಟರ್ ಜೊತೆಗೆ ಅಭಯ್ ಸಿಂಗ್ ಕೈ ಹಿಡಿಯುತ್ತಿದ್ದಾರೆ. ನಾನು 35 ವರ್ಷ ರಾಜ್ಯದಲ್ಲಿ ರಾಜಕಾರಣ ಮಾಡಿರುವೆ. ಒಮ್ಮೆಯೂ ಶೆಟ್ಟರ್ ಜೊತೆಗೆ ಜಗಳವಾಡಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

“ಶೆಟ್ಟರ್ ಯಾವುದೇ ವಿವಾದ ಇಲ್ಲದೆ ಕೆಲಸ ಮಾಡಿಕೊಂಡಿದ್ದಾರೆ ಬಂದಿದ್ದಾರೆ. ಇವರು ನೇರ ಮಾತಿನ ರಾಜಕಾರಣಿ. ಜಗದೀಶ್ ಶೆಟ್ಟರ್‌ ಅವರಿಗೆ ಧಾರವಾಡ ಭಾಗದ ಕ್ಷೇತ್ರಗಳ ಹೊಣೆ ನೀಡುತ್ತೇವೆ” ಎಂದಿದ್ದಾರೆ.

ಎಂ ಬಿ ಪಾಟೀಲ್ ಅವರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕೆಪಿಸಿಸಿ ಕಚೇರಿಗೆ ಬಂದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಅವರು ಹಾಜರಿದ್ದರು.

ಹುಬ್ಬಳಿ – ಧಾರವಾಡ ಸೆಂಟ್ರಲ್ ಸೀಟು ಹಂಚಿಕೆ ವಿಚಾರವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ನಾಯಕರು ಶೆಟ್ಟರ್‌ ಮನವೊಲಿಕೆ ಯತ್ನಿಸಿ ವಿಫಲವಾಗಿದ್ದಾರೆ.

ಆದರೆ, ಬಿಜೆಪಿ ನಾಯಕರ ಮನವೊಲಿಕೆ ಮತ್ತು ಆಫರ್‌ಗಳನ್ನು ತಿರಸ್ಕರಿಸಿರುವ ಜಗದೀಶ್ ಶೆಟ್ಟರ್ ಪಕ್ಷದ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಬಿಜೆಪಿ ತೊರೆಯುವ ಶೆಟ್ಟರ್‌ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿರೋಧಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶೆಟ್ಟರ್‌, ”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನಿಸಿದ್ದರು.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...