Homeಮುಖಪುಟನಿವೃತ್ತ CJI, ರಾಜ್ಯಸಭಾ ಸದಸ್ಯ ರಂಜನ್‌ ಗೊಗೊಯ್‌ಗೆ Z+ ಭದ್ರತೆ ನೀಡಿದ ಕೇಂದ್ರ

ನಿವೃತ್ತ CJI, ರಾಜ್ಯಸಭಾ ಸದಸ್ಯ ರಂಜನ್‌ ಗೊಗೊಯ್‌ಗೆ Z+ ಭದ್ರತೆ ನೀಡಿದ ಕೇಂದ್ರ

- Advertisement -
- Advertisement -

ನಿವೃತ್ತ ಮುಖ್ಯ ನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯರಾದ ರಂಜನ್ ಗೊಗೊಯ್‌ರವರಿಗೆ ಕೇಂದ್ರ ಸರ್ಕಾರವು ‘Z+ ವಿಐಪಿ’ ಶ್ರೇಣಿಯ ಭದ್ರತೆ ಒದಗಿಸಿದೆ.

ಈ ಮೊದಲು ಅವರು ದೆಹಲಿ ಪೊಲೀಸ್‌ ರಕ್ಷಣೆ ಪಡೆದಿದ್ದರು. ಈಗ ಒದಗಿಸಿರುವ ಭದ್ರತೆಯಿಂದ ಅವರು ದೇಶಾದ್ಯಂತ ಸಂಚರಿಸುವಾಗ ಸಿಆರ್‌ಪಿಎಫ್‌ನ ಸಶಸ್ತ್ರ ಪಡೆಗಳು ಅವರಿಗೆ ಭದ್ರತೆ ನೀಡಲಿವೆ.

8-12 ಜನ ಸಶಸ್ತ್ರ ಸಿಆರ್‌ಪಿಎಫ್‌ ಕಮ್ಯಾಂಡೋಗಳು ರಂಜನ್ ಗೊಗೊಯ್‌ರವರಿಗೆ ಭದ್ರತೆ ಒದಗಿಸಲಿದ್ದು ಪ್ರಯಾಣ ಮತ್ತು ಮನೆ ಎರಡೂ ಕಡೆ ರಕ್ಷಣೆ ಒದಗಿಸಲಿವೆ ಎನ್ನಲಾಗಿದೆ. ಸಿಆರ್‌ಪಿಎಫ್ ವಿಐಪಿ ಭದ್ರತೆ ಪಡಯುತ್ತಿರುವ 63ನೇ ವ್ಯಕ್ತಿ ಗೊಗೊಯ್ ಆಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ಗೊಗೊಯ್‌ರವರು 2019ರ ನವೆಂಬರ್ ತಿಂಗಳಿನಲ್ಲಿ ನಿವೃತ್ತರಾದರು. ನಂತರ ಅವರನ್ನು ಕೇಂದ್ರ ಸರ್ಕಾರವು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿತು.

ಕೆಲದಿನಗಳ ಹಿಂದೆ ಕಾಂಗ್ರೆಸ್‌ನ ತರುಣ್‌ ಗೊಗೊಯ್‌ರವರು “ತಮಗಿರುವ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿಯು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಸಿಜೆಐ ರಂಜನ್‌ ಗೊಗೊಯ್‌ರವರನ್ನು ಕಣಕ್ಕಿಳಿಸಲಿದೆ” ಎಂಬ ಹೇಳಿಕೆ ನೀಡಿದ್ದರು. ಆದರೆ ಅದನ್ನು ನಿರಾಕರಿಸಿದ ಗೊಗೊಯ್ ನನಗೆ ಅಂತಹ ಬಯಕೆಯಿಲ್ಲ, ಆ ರೀತಿಯ ಆಕಾಂಕ್ಷೆಗಳನ್ನು ಇಟ್ಟುಕೊಳ್ಳಲು ನಾನು ರಾಜಕಾರಣಿಯಲ್ಲ. ಯಾರೂ ಕೂಡ ನಾನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೆಸರಿಸಿಲ್ಲ ಎಂದು ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.

ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದಕ್ಕಾಗಿ ಒಂದು ಅವಕಾಶವೆಂದು ಭಾವಿಸಿ ರಾಜ್ಯಸಭಾ ಸದಸ್ಯತ್ವನ್ನು ಒಪ್ಪಿಕೊಂಡೆ. ನಾನು ಪ್ರಜ್ಞಾಪೂರ್ವಕವಾಗಿಯೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮಕರಣವನ್ನು ಆರಿಸಿಕೊಂಡೆ. ಏಕೆಂದರೆ ಅದು ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ನೀಡುತ್ತದೆ. ಅಂದ ಮಾತ್ರಕ್ಕೆ ನಾನು ರಾಜಕಾರಣಿಯೇ ಎಂದು ಅವರು ಪ್ರಶ್ನಿಸಿದ್ದರು.


ಇದನ್ನೂ ಓದಿ: ನಾನು ಅಸ್ಸಾಂನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...