Homeಮುಖಪುಟಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

- Advertisement -
- Advertisement -

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡ್‌ನ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಮೇಲೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದು, ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು ಎಂದು ಹೇಳಿದ್ದಾರೆ.

ಆದಿವಾಸಿಗಳು, ದಲಿತರು ಮತ್ತು ರಾಜ್ಯದ ಇತರ ಅಂಚಿನಲ್ಲಿರುವ ಸಮುದಾಯಗಳ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಸೊರೇನ್ ಪ್ರತಿಜ್ಞೆ ಮಾಡಿದರು. “ಇಂದು ನಾನು ಜಾರ್ಖಂಡ್ ಮುಕ್ತಿ ಮೋರ್ಚಾದ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಜಾರ್ಖಂಡ್‌ನ ಆದಿವಾಸಿಗಳು, ದಲಿತರು, ಹಿಂದುಳಿದ ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಮೇಲೆ ನನ್ನ ಹೋರಾಟ ಮುಂದುವರಿಯುತ್ತದೆ” ಎಂದು ಸೋರೇನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದಿದ ಚಂಪೈ

ಪಕ್ಷದ ಮುಖ್ಯಸ್ಥ ಶಿಬು ಸೊರೇನ್‌ಗೆ ಪತ್ರ ಬರೆದಿರುವ ಹಿರಿಯ ಬುಡಕಟ್ಟು ನಾಯಕ, ಜಾರ್ಖಂಡ್ ಮುಕ್ತಿ ಮೋರ್ಚಾದ ಪ್ರಸ್ತುತ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ನಂತರ ಬಲವಂತವಾಗಿ ಹುದ್ದೆ ತ್ಯಜಿಸಬೇಕಾಯಿತು ಎಂದು ಹೇಳಿದ್ದಾರೆ. “ನಿಮ್ಮ ನಾಯಕತ್ವದಲ್ಲಿ ನಾವು ಕಲ್ಪಿಸಿಕೊಂಡ ಪಕ್ಷವು ಕಾಡು, ಪರ್ವತಗಳು ಮತ್ತು ಹಳ್ಳಿಗಳಲ್ಲಿ ಶ್ರಮಿಸಿದ ಪಕ್ಷವು ಈಗ ದಾರಿ ತಪ್ಪಿದೆ ಎಂದು ನಾನು ಬಹಳ ದುಃಖದಿಂದ ಹೇಳುತ್ತೇನೆ. ನನಗೆ, ಜೆಎಂಎಂ ಒಂದು ಕುಟುಂಬದಂತೆ. ಆದರೆ, ಇತ್ತೀಚಿನ ಬೆಳವಣಿಗೆಗಳಿಂದಾಗಿ ನಾನು ಈ ಕಠಿಣ ನಿರ್ಧಾರವನ್ನು ತೀವ್ರ ನೋವಿನಿಂದ ಮಾಡಬೇಕಾಗಿದೆ” ಎಂದು ಚಂಪೈ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಮುಖ್ಯಮಂತ್ರಿಯಾಗಿ “ಕಹಿ ಅವಮಾನ” ಅನುಭವಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಈ ಹಿಂದೆ ಹೇಳಿದ್ದರು. ಇದು ಪರ್ಯಾಯ ಮಾರ್ಗವನ್ನು ಹುಡುಕುವಂತೆ ಒತ್ತಾಯಿಸಿತು. ಜುಲೈ ಮೊದಲ ವಾರದಲ್ಲಿ ಅವರ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಪಕ್ಷದ ನಾಯಕತ್ವವು ಅವರಿಗೆ ತಿಳಿಯದೆ ಏಕಾಏಕಿ ರದ್ದುಗೊಳಿಸಿದೆ ಎಂದು ಆರೋಪಿಸಿದರು. ಬಾಂಗ್ಲಾದೇಶದಿಂದ “ಅತಿರೇಕದ” ಒಳನುಸುಳುವಿಕೆಯಿಂದಾಗಿ ರಾಜ್ಯದ ಸಂತಾಲ್ ಪರಗಣ ಪ್ರದೇಶದಲ್ಲಿ ಅಪಾಯದಲ್ಲಿರುವ ಬುಡಕಟ್ಟು ಗುರುತು ಮತ್ತು ಅಸ್ತಿತ್ವವನ್ನು ಉಳಿಸಲು ತಾನು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಚಂಪೈ ಸೊರೇನ್ ಮಂಗಳವಾರ ಪ್ರತಿಪಾದಿಸಿದ್ದರು. ಕೇಸರಿ ಪಕ್ಷ ಮಾತ್ರ ಬುಡಕಟ್ಟು ಜನಾಂಗದವರ ವಿಷಯದಲ್ಲಿ ಗಂಭೀರವಾಗಿದೆ ಎಂದು ತೋರುತ್ತದೆ. ಆದರೆ, ಇತರರು ಮತ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಹಿರಿಯ ಜೆಎಂಎಂ ನಾಯಕ ಹೇಳಿದರು.

ಆಗಸ್ಟ್ 30 ರಂದು ಬಿಜೆಪಿ ಸೇರ್ಪಡೆ

ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಚಂಪೈ ಸೊರೇನ್ ಅವರು ಆಗಸ್ಟ್ 30 ರಂದು ಬಿಜೆಪಿಗೆ ಸೇರಲಿದ್ದಾರೆ. 67 ವರ್ಷದ ನಾಯಕ ಅವರು ಬುಡಕಟ್ಟು ಅಸ್ಮಿತೆ ಮತ್ತು ಅಸ್ತಿತ್ವವನ್ನು ಉಳಿಸಲು ಬಿಜೆಪಿಗೆ ಸೇರುತ್ತಿರುವುದಾಗಿ ಹೇಳಿದರು.

ಇದನ್ನೂ ಓದಿ; ‘ಜಾಮೀನು ನಿಯಮ, ಜೈಲು ವಿನಾಯಿತಿ’ ಪಿಎಂಎಲ್‌ಎ ಪ್ರಕರಣಕ್ಕೂ ಅನ್ವಯ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...