Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...