Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...