Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...