Homeಕರ್ನಾಟಕಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಉಕ್ರೇನ್ ದೇಶದಿಂದ ವಾಪಸ್ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, “‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು..? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ” ಎಂದಿದ್ದಾರೆ.

“ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು..? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ಗೆ ಕಳುಹಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

“ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ’ ಎಂದು ಆಗ್ರಹಿಸಿದ್ದಾರೆ.

“2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50 ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ..? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ..? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....