ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಯಿಂದ ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದ್ದ ವಿಧಾನಪರಿಷತ್ ಸದಸ್ಯ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು (ಜ.25) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಅವರು ಕೇಸರಿ ಪಕ್ಷಕ್ಕೆ ಮರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರಾದ ಜೆ.ಪಿ ನಡ್ಡಾ, ಭೂಪೇಂದ್ರ ಯಾದವ್ ಶೆಟ್ಟರ್ರನ್ನು ಮರಳಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
#WATCH | Former Karnataka CM Jagadish Shettar re-joins BJP in the presence of former CM-senior party leader BS Yediyurappa and state BJP President BY Vijayendra, at BJP Headquarters in Delhi.
He had quit BJP and joined Congress in April last year. pic.twitter.com/sVJpP9AVu2
— ANI (@ANI) January 25, 2024
ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಜೊತೆ ದೆಹಲಿಗೆ ತೆರಳಿದ್ದ ಶೆಟ್ಟರ್, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಬಿಜೆಪಿಗೆ ಮರಳಲು ಒಪ್ಪಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಯಡಿಯೂರಪ್ಪ ಜೊತೆ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
#WATCH | Former Karnataka CM Jagadish Shettar returns to BJP, meets the party's National President JP Nadda in Delhi pic.twitter.com/YHLgECx61d
— ANI (@ANI) January 25, 2024
ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿತ್ತು ಎಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶೆಟ್ಟರ್ಗೆ ಕಾಂಗ್ರೆಸ್ ಒಳ್ಳೆಯ ಸ್ವಾಗತ ನೀಡಿ ಬರಮಾಡಿಕೊಂಡಿತ್ತು. ಚುನಾವಣೆಯಲ್ಲಿ ಸೋತರೂ ಶೆಟ್ಟರ್ ಅವರನ್ನು ವಿಧಾನಪರಿಷತ್ಗೆ ನಾಮ ನಿರ್ದೇಶನ ಮಾಡಿ ಸ್ಥಾನಮಾನ ಕೊಟ್ಟಿದೆ.
ಇದನ್ನೂ ಓದಿ: ಬೀದರ್: ದಲಿತ ವಿದ್ಯಾರ್ಥಿಗೆ ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಹಲ್ಲೆ ಆರೋಪ; ನಾಲ್ವರ ಬಂಧನ