Homeಕರ್ನಾಟಕರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

'ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ'

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಜೊತೆಗೆ ಆದೇಶವನ್ನು ವಾಪಸ್ ಪಡೆಯುವವರೆಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಯಾವುದೇ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪತ್ರದ ವಿವರ ಹೀಗಿದೆ: 

ರಾಷ್ಟ್ರೀಯ ಶಿಕ್ಷಣ ನೀತಿ-202 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ..? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ..?
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆ ಮಾಡಬಯಸಿದರೆ, ಕೂಡಲೆ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೇ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...