HomeUncategorizedರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ

- Advertisement -
- Advertisement -

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ನಾಯಕರ ಜೊತೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ದೆಹಲಿ ಭೇಟಿಯ ಪ್ರಮುಖ ವಿಷಯವಾಗಿದೆ. ಈ ಕುರಿತು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಿನ್ನೆಯಷ್ಟೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪಗೆ ಸಲಹೆ ನೀಡುತ್ತಾ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಟ್ವಿಟ್ಟರ್‌ನಲ್ಲಿ, ರಾಜ್ಯದ ಸಮಸ್ಯೆಗಳ ಪಟ್ಟಿ, ಕೇಂದ್ರ ಸರ್ಕಾರ ಕೊಡಬೇಕಾಗಿರುವ ಪರಿಹಾರಗಳ ಕುರಿತು ಸಿಎಂ ಯಡಿಯೂರಪ್ಪಗೆ ನೆನಪು ಮಾಡಿದ್ದಾರೆ. “ಕಾಡಿಬೇಡಿ ಪ್ರಧಾನಿ ಭೇಟಿಗೆ ಅವಕಾಶ ಪಡೆದಿದ್ದೀರಿ, ಈ ಅವಕಾಶವನ್ನು ಕುರ್ಚಿ ಉಳಿಸಿಕೊಳ್ಳುವುದಕ್ಕೆ ಬಳಸದೆ ರಾಜ್ಯದ ಹಿತರಕ್ಷಣೆಗಾಗಿ ಬಳಸಿ” ಎಂದು ಕಿವಿಮಾತು ಹೇಳಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಗೆ 35,000ಕೋಟಿ ಪರಿಹಾರ ಕೇಳಿದ್ದೀರಿ. ಆದರೆ ಸಿಕ್ಕಿದ್ದು 1,869 ಕೋಟಿ. ಈ ಬಾರಿಯೂ 8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆಗೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್‌ಡಿಆರ್‌ಎಫ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಬಗ್ಗೆ ಪ್ರಧಾನಿಯವರಿಗೆ ಜವಾಬ್ದಾರಿ ನೆನಪಿಸಿ, ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಪ್ರಧಾನಿಯವರ ಕಣ್ಣು ತೆರಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದಿದ್ದು, ಜಿಎಸ್‌ಟಿ ಪರಿಹಾರ ನೀಡದೇ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ. ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿ ಪಡಿಸಲು ಹೇಳಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಸಂಪುಟ ವಿಸ್ತರಣೆಯನ್ನು ಪ್ರಧಾನವಾಗಿಟ್ಟುಕೊಂಡು ದೆಹಲಿ ತಲುಪಿರುವ ಯಡಿಯೂರಪ್ಪ ಅವರಿಗೆ ರಾಜ್ಯದ ಸಮಸ್ಯೆಗಳ ಪಟ್ಟಿಯನ್ನು ನೀಡಿ ಬಗೆ ಹರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...