HomeUncategorizedರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ

- Advertisement -
- Advertisement -

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ನಾಯಕರ ಜೊತೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ದೆಹಲಿ ಭೇಟಿಯ ಪ್ರಮುಖ ವಿಷಯವಾಗಿದೆ. ಈ ಕುರಿತು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಿನ್ನೆಯಷ್ಟೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪಗೆ ಸಲಹೆ ನೀಡುತ್ತಾ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಟ್ವಿಟ್ಟರ್‌ನಲ್ಲಿ, ರಾಜ್ಯದ ಸಮಸ್ಯೆಗಳ ಪಟ್ಟಿ, ಕೇಂದ್ರ ಸರ್ಕಾರ ಕೊಡಬೇಕಾಗಿರುವ ಪರಿಹಾರಗಳ ಕುರಿತು ಸಿಎಂ ಯಡಿಯೂರಪ್ಪಗೆ ನೆನಪು ಮಾಡಿದ್ದಾರೆ. “ಕಾಡಿಬೇಡಿ ಪ್ರಧಾನಿ ಭೇಟಿಗೆ ಅವಕಾಶ ಪಡೆದಿದ್ದೀರಿ, ಈ ಅವಕಾಶವನ್ನು ಕುರ್ಚಿ ಉಳಿಸಿಕೊಳ್ಳುವುದಕ್ಕೆ ಬಳಸದೆ ರಾಜ್ಯದ ಹಿತರಕ್ಷಣೆಗಾಗಿ ಬಳಸಿ” ಎಂದು ಕಿವಿಮಾತು ಹೇಳಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಗೆ 35,000ಕೋಟಿ ಪರಿಹಾರ ಕೇಳಿದ್ದೀರಿ. ಆದರೆ ಸಿಕ್ಕಿದ್ದು 1,869 ಕೋಟಿ. ಈ ಬಾರಿಯೂ 8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆಗೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್‌ಡಿಆರ್‌ಎಫ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಬಗ್ಗೆ ಪ್ರಧಾನಿಯವರಿಗೆ ಜವಾಬ್ದಾರಿ ನೆನಪಿಸಿ, ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಪ್ರಧಾನಿಯವರ ಕಣ್ಣು ತೆರಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದಿದ್ದು, ಜಿಎಸ್‌ಟಿ ಪರಿಹಾರ ನೀಡದೇ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ. ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿ ಪಡಿಸಲು ಹೇಳಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಸಂಪುಟ ವಿಸ್ತರಣೆಯನ್ನು ಪ್ರಧಾನವಾಗಿಟ್ಟುಕೊಂಡು ದೆಹಲಿ ತಲುಪಿರುವ ಯಡಿಯೂರಪ್ಪ ಅವರಿಗೆ ರಾಜ್ಯದ ಸಮಸ್ಯೆಗಳ ಪಟ್ಟಿಯನ್ನು ನೀಡಿ ಬಗೆ ಹರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...