Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...