Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...