Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...