Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...