Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...