Homeಕರ್ನಾಟಕಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಭದ್ರಾವತಿಯಿಂದ ಬಂದಿರುವ ಕೊಲೆ ಬೆದರಿಕೆ ಪತ್ರವನ್ನು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹಂಚಿಕೊಂಡಿದ್ದಾರೆ.

- Advertisement -
- Advertisement -

ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ 61 ಚಿಂತಕರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಈ ಕುರಿತು ಕುಂವೀಯವರು ಮಾಹಿತಿ ಹಂಚಿಕೊಂಡಿದ್ದು, “ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ, ನೀವು ಓದಿ ಆನಂದಿಸಿ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಹಿಜಾಬ್‌ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಕೋಮುಗಳ ನಡುವೆ ಕೋಮು ದ್ವೇಷ ಬಿತ್ತುತ್ತಿರುವ ಮತೀಯ ಸಂಘಟನೆಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿಯವರು ಸಮರ ಸಾರಿದ್ದಾರೆ. ಸಿದ್ದರಾಮಯ್ಯನವರು ಮೊದಲಿನಿಂದಲೂ ಸಂಘಪರಿವಾರದ ವಿರುದ್ಧ ಮಾತನಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಆಗುತ್ತಿರುವ ಬೆಳವಣಿಗೆಗಳಿಗೆ ಸಾಹಿತಿಗಳು, ಕಲಾವಿದರು, ಬರಹಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆಯನ್ನು ವಿಧಿಸಿ ಏಕಾಏಕಿ ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಷಯ ಒಳಗೊಂಡಂತೆ ಕೋಮು ಸಾಮರಸ್ಯಕ್ಕೆ ಆಗ್ರಹಿಸಿ 61 ಜನ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು.

ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ತೊಂದರೆಗೊಳಗಾದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಾಂವಿಧಾನಿಕ ಶಿಕ್ಷಣದ ಹಕ್ಕನ್ನು ನಿರಾಕರಿಸದೇ ಸಮವಸ್ತ್ರ ಭಾಗವಾಗಿ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು, ಅದಕ್ಕೆ ಅಗತ್ಯವಾದ ಸೂಚನೆಯನ್ನು ಅಧಿಕೃತವಾಗಿ ಸರಕಾರವು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದನ್ನೂ ಓದಿರಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಧರ್ಮ ಭೇದವಿಲ್ಲದೇ ಈ ಮೊದಲು ನಡೆಯುತ್ತಿದ್ದ ಸಾಮರಸ್ಯ ಪರಂಪರೆಯ ಚಟುವಟಿಕೆಗಳು ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಬೇಕು. ದುರುದ್ದೇಶಪೂರ್ವಕವಾಗಿ ಅದನ್ನು ಹಾಳುಗೆಡಹುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪತ್ರ ಬರೆದ ಚಿಂತಕರು

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮದ್ ಕುಂಞಿ, ಡಾ.ಪುರುಷೋತ್ತಮ ಬಿಳಿಮಲೆ, ಪ್ರೊ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರೀಕೆರೆ, ಚಿದಂಬರ ರಾವ್‌ ಜಂಬೆ, ಡಾ.ವಸುಂಧರಾ ಭೂಪತಿ, ಕೆ.ಎಸ್.ವಿಮಲಾ, ಡಾ.ಎನ್‌.ಗಾಯತ್ರಿ, ಡಾ.ಜಿ.ರಾಮಕೃಷ್ಣ, ಅಚ್ಯುತ, ವಾಸುದೇವ ಉಚ್ಚಿಲ, ಟಿ.ಸುರೇಂದ್ರ ರಾವ್‌, ಎಸ್‌.ದೇವೇಂದ್ರ ಗೌಡ, ಬಿ.ಐಳಿಗೆರ, ಜೆ.ಸಿ.ಶಶಿಧರ್‌, ಡಾ.ಕಾಶಿನಾಥ್ ಅಂಬಲಗಿ, ಡಾ.ಪ್ರಭು ಖಾನಾಪುರೆ, ಎನ್‌.ಕೆ.ವಸಂತ್‌ ರಾಜ್‌, ಯಶವಂತ ಮರೋಳಿ, ಡಾ.ಕೆ.ಷರೀಫಾ, ಡಾ.ಹೇಮಾ ಪಟ್ಟಣ ಶೆಟ್ಟಿ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಚಂದ್ರ ಪೂಜಾರಿ, ಪ್ರೊ.ನರೇಂದ್ರ ನಾಯಕ್‌, ಪ್ರೊ.ಕೆ.ಫಣಿರಾಜ್‌, ಡಾ.ಇಂದಿರಾ ಹೆಗಡೆ, ಪ್ರೊ.ರಾಜೇಂದ್ರ ಉಡುಪ, ಪ್ರೊ.ಮಾಧವಿ ಭಂಡಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಕೆ.ರಾಘವ, ಅಮೃತಾ ಅತ್ರಾಡಿ, ಕೆ.ಸದಾಶಿವ ಮಾಸ್ಟ್ರು, ಪ್ರೊ.ಭೂಮಿಗೌಡ, ಎಂ.ದೇವದಾಸ, ಎಸ್‌.ವೈ.ಗುರುಶಾಂತ್‌, ವೆಂಕಟೇಶ್‌ ಪ್ರಸಾದ್, ಚಂದ್ರಹಾಸ ಉಲ್ಲಾಳ್‌, ಐ.ಕೆ.ಬೋಳವಾರ್‌, ಮನೋಜ ವಾಮಂಜೂರ್‌, ಪ್ರಭಾಕರ್‌ ಕಾಪಿಕಾಡ್‌, ಟಿ.ಆರ್‌.ಭಟ್‌, ಶ್ಯಾಮಸುಂದರ ರಾವ್, ನಾ.ದಿವಾಕರ್‌, ಕಲೀಂ, ಸಿ.ಬಸವಲಿಂಗಯ್ಯ, ಎಲ್.ಜಗನ್ನಾಥ್‌, ಕೆ.ಎಸ್.ಲಕ್ಷ್ಮಿ, ಬಿ.ಎಂ.ಹನೀಫ್‌, ನಾಗೇಶ್ ಕಲ್ಲೂರ, ಸುಷ್ಮಾ, ಡಾ.ಕಾಳೇಗೌಡ ನಾಗವಾರ, ಕೋದಂಡ ರಾಮ್‌, ಮಾವಳ್ಳಿ ಶಂಕರ್‌, ಯಮುನಾ ಗಾಂವ್ಕರ್‌, ಬಿ.ಶ್ರೀಪಾದ್ ಭಟ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....