Homeಮುಖಪುಟಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

ಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಾಲಿವುಡ್ ವಲಯದಲ್ಲಿ ಖ್ಯಾತನಾಮರಾಗಿರುವ ಬಾಬಾ ಸಿದ್ದೀಕ್ ಅವರು ಶನಿವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಬಾಬಾ ಸಿದ್ದೀಕ್, ಫೆಬ್ರವರಿ 8ರಂದು ರಾಜೀನಾಮೆ ನೀಡುವ ಮೂಲಕ ಪಕ್ಷದೊಂದಿಗಿನ 48 ವರ್ಷಗಳ ಸಂಬಂಧ ಕಡಿದುಕೊಂಡಿದ್ದರು.

ಎನ್‌ಸಿಪಿ ಸೇರ್ಪಡೆ ಬಳಿಕ ಮಾತನಾಡಿದ ಬಾಬಾ ಸಿದ್ದೀಕ್, ” ಕಾಂಗ್ರೆಸ್‌ನ ಕುರಿತು ನನಗೆ ಬಹಳಷ್ಟು ಹೇಳಲು ಇದೆ. ಆ ಪಕ್ಷದಲ್ಲಿ ನನ್ನನ್ನು ಸಾಂಬಾರಿನ ಸುವಾಸನೆಗೆ ಕರಿಬೇವು ಬಳಸುವಂತೆ ನನ್ನನ್ನು ಬಳಸಿಕೊಂಡಿದ್ದರು. ಪಕ್ಷದ ತೊರೆದ ಬಗ್ಗೆ ದುಖಃವಿದೆ. ಆದರೆ, ಹಲವು ವರ್ಷಗಳ ಜಂಜಾಟ ಕೊನೆಗೊಂಡಿತಲ್ಲ ಎಂಬ ಖುಷಿಯೂ ಇದೆ” ಎಂದಿದ್ದಾರೆ.

“ಬಹಳ ಸಣ್ಣ ಪ್ರಾಯದಲ್ಲೇ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದೆ. ಇದು 48 ವರ್ಷಗಳ ಕಾಲದ ಮಹತ್ವದ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹೇಳಲು ತುಂಬಾ ವಿಷಯಗಳಿವೆ. ಆದರೆ, ಅವುಗಳನ್ನು ಹೇಳದಿರುವುದೇ ಉತ್ತಮ. ಈ ಪ್ರಯಾಣದಲ್ಲಿ ನನ್ನ ಜೊತೆ ಭಾಗಿಯಾದ ಎಲ್ಲರಿಗೂ ಧನ್ಯವಾದಗಳು” ಎಂದು ಬಾಬಾ ಸಿದ್ದಿಕ್ ಫೆ.8ರಂದು ತನ್ನ ರಾಜೀನಾಮೆ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ ಮಹಾರಾಷ್ಟ್ರ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿದ್ದಾರೆ. ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಇತ್ತೀಚೆಗೆ ಕಾಂಗ್ರೆಸ್ ತೊರೆದು ಸಿಎಂ ಏಕನಾಥ್‌ ಶಿಂದೆ ಬಣ ಸೇರಿದ್ದರು. ಈ ಬೆನ್ನಲ್ಲೇ ಮತ್ತೊಬ್ಬ ನಾಯಕ ಬಾಬಾ ಸಿದ್ದೀಕ್ ರಾಜೀನಾಮೆ ನೀಡಿದ್ದಾರೆ.

ಬಾಬಾ ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಕಾಂಗ್ರೆಸ್‌ ಶಾಸಕರಾಗಿದ್ದರು. ಅಲ್ಲದೆ, ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ, (2004-08) ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಈ ಹಿಂದೆ ಎರಡು ಸತತ ಅವಧಿಗಳು (1992-1997) ಪುರಸಭೆಯ ಕಾರ್ಪೊರೇಟರ್ ಆಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಮತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿರಿಯ ಉಪಾಧ್ಯಕ್ಷರಾಗಿಯೂ ಸೇವೆ ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಶಿವಸೇನೆ ಯುಬಿಟಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್ (ಎನ್‌ಸಿಪಿಯ ಶರದ್ ಪವಾರ್ ಬಣ) ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳಲಿದೆ.

ಇದನ್ನೂ ಓದಿ : ‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...