Homeಮುಖಪುಟಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

ಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಾಲಿವುಡ್ ವಲಯದಲ್ಲಿ ಖ್ಯಾತನಾಮರಾಗಿರುವ ಬಾಬಾ ಸಿದ್ದೀಕ್ ಅವರು ಶನಿವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಬಾಬಾ ಸಿದ್ದೀಕ್, ಫೆಬ್ರವರಿ 8ರಂದು ರಾಜೀನಾಮೆ ನೀಡುವ ಮೂಲಕ ಪಕ್ಷದೊಂದಿಗಿನ 48 ವರ್ಷಗಳ ಸಂಬಂಧ ಕಡಿದುಕೊಂಡಿದ್ದರು.

ಎನ್‌ಸಿಪಿ ಸೇರ್ಪಡೆ ಬಳಿಕ ಮಾತನಾಡಿದ ಬಾಬಾ ಸಿದ್ದೀಕ್, ” ಕಾಂಗ್ರೆಸ್‌ನ ಕುರಿತು ನನಗೆ ಬಹಳಷ್ಟು ಹೇಳಲು ಇದೆ. ಆ ಪಕ್ಷದಲ್ಲಿ ನನ್ನನ್ನು ಸಾಂಬಾರಿನ ಸುವಾಸನೆಗೆ ಕರಿಬೇವು ಬಳಸುವಂತೆ ನನ್ನನ್ನು ಬಳಸಿಕೊಂಡಿದ್ದರು. ಪಕ್ಷದ ತೊರೆದ ಬಗ್ಗೆ ದುಖಃವಿದೆ. ಆದರೆ, ಹಲವು ವರ್ಷಗಳ ಜಂಜಾಟ ಕೊನೆಗೊಂಡಿತಲ್ಲ ಎಂಬ ಖುಷಿಯೂ ಇದೆ” ಎಂದಿದ್ದಾರೆ.

“ಬಹಳ ಸಣ್ಣ ಪ್ರಾಯದಲ್ಲೇ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದೆ. ಇದು 48 ವರ್ಷಗಳ ಕಾಲದ ಮಹತ್ವದ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹೇಳಲು ತುಂಬಾ ವಿಷಯಗಳಿವೆ. ಆದರೆ, ಅವುಗಳನ್ನು ಹೇಳದಿರುವುದೇ ಉತ್ತಮ. ಈ ಪ್ರಯಾಣದಲ್ಲಿ ನನ್ನ ಜೊತೆ ಭಾಗಿಯಾದ ಎಲ್ಲರಿಗೂ ಧನ್ಯವಾದಗಳು” ಎಂದು ಬಾಬಾ ಸಿದ್ದಿಕ್ ಫೆ.8ರಂದು ತನ್ನ ರಾಜೀನಾಮೆ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ ಮಹಾರಾಷ್ಟ್ರ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿದ್ದಾರೆ. ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಇತ್ತೀಚೆಗೆ ಕಾಂಗ್ರೆಸ್ ತೊರೆದು ಸಿಎಂ ಏಕನಾಥ್‌ ಶಿಂದೆ ಬಣ ಸೇರಿದ್ದರು. ಈ ಬೆನ್ನಲ್ಲೇ ಮತ್ತೊಬ್ಬ ನಾಯಕ ಬಾಬಾ ಸಿದ್ದೀಕ್ ರಾಜೀನಾಮೆ ನೀಡಿದ್ದಾರೆ.

ಬಾಬಾ ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಕಾಂಗ್ರೆಸ್‌ ಶಾಸಕರಾಗಿದ್ದರು. ಅಲ್ಲದೆ, ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ, (2004-08) ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಈ ಹಿಂದೆ ಎರಡು ಸತತ ಅವಧಿಗಳು (1992-1997) ಪುರಸಭೆಯ ಕಾರ್ಪೊರೇಟರ್ ಆಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಮತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿರಿಯ ಉಪಾಧ್ಯಕ್ಷರಾಗಿಯೂ ಸೇವೆ ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಶಿವಸೇನೆ ಯುಬಿಟಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್ (ಎನ್‌ಸಿಪಿಯ ಶರದ್ ಪವಾರ್ ಬಣ) ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳಲಿದೆ.

ಇದನ್ನೂ ಓದಿ : ‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...