Homeಮುಖಪುಟಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

ಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಸಂಸದೆ ಸುಶ್ಮಿತಾ ದೇವ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಶ್ಮಿತಾ ದೇವ್, ತೃಣಮೂಲ ಪಕ್ಷದ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಒಬ್ರಿಯೆನ್ ಅವರ ಸಮ್ಮುಖದಲ್ಲಿ ಕೊಲ್ಕಾತ್ತಾ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಂಸದೆ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆಯಲ್ಲಿ “ಮಾಜಿ ಕಾಂಗ್ರೆಸ್‌ ಸದಸ್ಯೆ ಮತ್ತು ಮಹಿಳಾ ಘಟಕದ ಮಾಜಿ ಅಧ್ಯಕ್ಷೆ” ಎಂದು ಬದಲಾಯಿಸಿಕೊಂಡಿದ್ದು ಸೋಮವಾರ ಬೆಳಿಗ್ಗೆ ಅವರು ಪಕ್ಷ ತೊರೆಯಲಿರುವ ಸೂಚನೆಯಾಗಿತ್ತು.

ಬಳಿಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಪತ್ರದಲ್ಲಿ “ಸಾರ್ವಜನಿಕ ಸೇವೆಯ ಹೊಸ ಅಧ್ಯಾಯ” ಆರಂಭಿಸುವ ಮಾತನಾಡಿದ್ದಾರೆ ಎನ್ನಲಾಗಿದೆ. ಆದರೆ, ಪಕ್ಷವು ಸುಶ್ಮಿತಾ ದೇವ್ ಪಕ್ಷ ತೊರೆಯುವುದು ಮತ್ತು ರಾಜೀನಾಮೆ ಪತ್ರ ಕಳುಹಿಸಿರುವುದನ್ನು ಅಧಿಕೃತವಾಗಿ ನಿರಾಕರಿಸಿತ್ತು.

“ನಾನು ಸುಶ್ಮಿತಾ ದೇವ್ ಜೊತೆ ಮಾತನಾಡಲು ಪ್ರಯತ್ನಿಸಿದೆ, ಅವರ ಫೋನ್ ಆಫ್ ಆಗಿತ್ತು. ಇಂದಿಗೂ ಕೂಡ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ. ಸುಶ್ಮಿತಾ ದೇವ್ ಜೊತೆ ಮಾತನಾಡುವವರೆಗೂ ನಾನು ಏನನ್ನೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗಾರರಿಗೆ ತಿಳಿಸಿದ್ದರು.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಆಕೆಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಕಾಂಗ್ರೆಸ್‌ನ ಮಾಜಿ ಸಂಸದೆ ಕೋಲ್ಕತ್ತಾಕ್ಕೆ ಬಂದಿದ್ದಾರೆ. “ಅವರು ಪಕ್ಷಕ್ಕೆ ಸೇರಿದರೆ ಅಸ್ಸಾಂನಲ್ಲಿ ತೃಣಮೂಲದ ಪ್ರಮುಖ ನಾಯಕಿಯಾಗುತ್ತಾರೆ” ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿದ್ದವು.

ಮೂಲಗಳು ಹೇಳುವಂತೆ ಸುಶ್ಮಿತಾ ದೇವ್ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅತೃಪ್ತಿ ಹೊಂದಿದ್ದರು ಎನ್ನಲಾಗಿದೆ. ವಿಶೇಷವಾಗಿ ಏಪ್ರಿಲ್-ಮೇ ತಿಂಗಳ ಅಸ್ಸಾಂ ಚುನಾವಣೆಯಲ್ಲಿ ಎಐಯುಡಿಎಫ್ ಜೊತೆ ಕಾಂಗ್ರೆಸ್ ಕೈಜೋಡಿಸುವ ನಿರ್ಧಾರದ ಬಗ್ಗೆ ಅಸಮಧಾನ ಹೊಂದಿದ್ದರು.

ಚುನಾವಣಾ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕತ್ವದೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರು. ಬಹುತೇಕ ಮಾರ್ಚ್‌ನಲ್ಲಿಯೇ ಅವರು ಪಕ್ಷವನ್ನು ತ್ಯಜಿಸಿದ್ದರು. ಆದರೆ ಸೋನಿಯಾ ಗಾಂಧಿ ಅವರ ಮನವೊಲಿಸಿದರು ಎಂದು ಮೂಲಗಳು ಹೇಳುತ್ತವೆ.

ಅಸ್ಸಾಂನ ಪ್ರಭಾವಿ ಬಂಗಾಳಿ ನಾಯಕ ಸಂತೋಷ್ ಮೋಹನ್ ದೇವ್ ಅವರ ಮಗಳಾಗಿದ್ದು, ಕಾಂಗ್ರೆಸ್ ನ ಮಹಿಳಾ ಘಟಕದ ಮುಖ್ಯಸ್ಥರಾಗಿದ್ದರು. ಇವರ ಕುಟುಂಬ ನಾಲ್ಕು ತಲೆಮಾರುಗಳಿಂದ ಕಾಂಗ್ರೆಸ್‌ನಲ್ಲಿತ್ತು.


ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...