Homeಮುಖಪುಟಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

ಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಸಂಸದೆ ಸುಶ್ಮಿತಾ ದೇವ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಶ್ಮಿತಾ ದೇವ್, ತೃಣಮೂಲ ಪಕ್ಷದ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಒಬ್ರಿಯೆನ್ ಅವರ ಸಮ್ಮುಖದಲ್ಲಿ ಕೊಲ್ಕಾತ್ತಾ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಂಸದೆ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆಯಲ್ಲಿ “ಮಾಜಿ ಕಾಂಗ್ರೆಸ್‌ ಸದಸ್ಯೆ ಮತ್ತು ಮಹಿಳಾ ಘಟಕದ ಮಾಜಿ ಅಧ್ಯಕ್ಷೆ” ಎಂದು ಬದಲಾಯಿಸಿಕೊಂಡಿದ್ದು ಸೋಮವಾರ ಬೆಳಿಗ್ಗೆ ಅವರು ಪಕ್ಷ ತೊರೆಯಲಿರುವ ಸೂಚನೆಯಾಗಿತ್ತು.

ಬಳಿಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಪತ್ರದಲ್ಲಿ “ಸಾರ್ವಜನಿಕ ಸೇವೆಯ ಹೊಸ ಅಧ್ಯಾಯ” ಆರಂಭಿಸುವ ಮಾತನಾಡಿದ್ದಾರೆ ಎನ್ನಲಾಗಿದೆ. ಆದರೆ, ಪಕ್ಷವು ಸುಶ್ಮಿತಾ ದೇವ್ ಪಕ್ಷ ತೊರೆಯುವುದು ಮತ್ತು ರಾಜೀನಾಮೆ ಪತ್ರ ಕಳುಹಿಸಿರುವುದನ್ನು ಅಧಿಕೃತವಾಗಿ ನಿರಾಕರಿಸಿತ್ತು.

“ನಾನು ಸುಶ್ಮಿತಾ ದೇವ್ ಜೊತೆ ಮಾತನಾಡಲು ಪ್ರಯತ್ನಿಸಿದೆ, ಅವರ ಫೋನ್ ಆಫ್ ಆಗಿತ್ತು. ಇಂದಿಗೂ ಕೂಡ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ. ಸುಶ್ಮಿತಾ ದೇವ್ ಜೊತೆ ಮಾತನಾಡುವವರೆಗೂ ನಾನು ಏನನ್ನೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗಾರರಿಗೆ ತಿಳಿಸಿದ್ದರು.

ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಆಕೆಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಕಾಂಗ್ರೆಸ್‌ನ ಮಾಜಿ ಸಂಸದೆ ಕೋಲ್ಕತ್ತಾಕ್ಕೆ ಬಂದಿದ್ದಾರೆ. “ಅವರು ಪಕ್ಷಕ್ಕೆ ಸೇರಿದರೆ ಅಸ್ಸಾಂನಲ್ಲಿ ತೃಣಮೂಲದ ಪ್ರಮುಖ ನಾಯಕಿಯಾಗುತ್ತಾರೆ” ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿದ್ದವು.

ಮೂಲಗಳು ಹೇಳುವಂತೆ ಸುಶ್ಮಿತಾ ದೇವ್ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅತೃಪ್ತಿ ಹೊಂದಿದ್ದರು ಎನ್ನಲಾಗಿದೆ. ವಿಶೇಷವಾಗಿ ಏಪ್ರಿಲ್-ಮೇ ತಿಂಗಳ ಅಸ್ಸಾಂ ಚುನಾವಣೆಯಲ್ಲಿ ಎಐಯುಡಿಎಫ್ ಜೊತೆ ಕಾಂಗ್ರೆಸ್ ಕೈಜೋಡಿಸುವ ನಿರ್ಧಾರದ ಬಗ್ಗೆ ಅಸಮಧಾನ ಹೊಂದಿದ್ದರು.

ಚುನಾವಣಾ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕತ್ವದೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರು. ಬಹುತೇಕ ಮಾರ್ಚ್‌ನಲ್ಲಿಯೇ ಅವರು ಪಕ್ಷವನ್ನು ತ್ಯಜಿಸಿದ್ದರು. ಆದರೆ ಸೋನಿಯಾ ಗಾಂಧಿ ಅವರ ಮನವೊಲಿಸಿದರು ಎಂದು ಮೂಲಗಳು ಹೇಳುತ್ತವೆ.

ಅಸ್ಸಾಂನ ಪ್ರಭಾವಿ ಬಂಗಾಳಿ ನಾಯಕ ಸಂತೋಷ್ ಮೋಹನ್ ದೇವ್ ಅವರ ಮಗಳಾಗಿದ್ದು, ಕಾಂಗ್ರೆಸ್ ನ ಮಹಿಳಾ ಘಟಕದ ಮುಖ್ಯಸ್ಥರಾಗಿದ್ದರು. ಇವರ ಕುಟುಂಬ ನಾಲ್ಕು ತಲೆಮಾರುಗಳಿಂದ ಕಾಂಗ್ರೆಸ್‌ನಲ್ಲಿತ್ತು.


ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...