Homeಮುಖಪುಟಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

- Advertisement -
- Advertisement -

ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಂಗಳವಾರ ತಮ್ಮ ಪಕ್ಷದ ಬೆಂಬಲವನ್ನು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಔಪಚಾರಿಕವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರವು “ಗೋವನ್‌‌ ವಿರೋಧಿ” ನೀತಿಗಳನ್ನು ಅನುಸರಿಸುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ ನಮ್ಮ ಸಂಬಂಧವು ಜುಲೈ 2019 ರಲ್ಲಿ ಕೊನೆಗೊಂಡಿತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಮರುಪರಿಶೀಲನೆಗೆ ಅವಕಾಶವಿಲ್ಲ. ಆದ್ದರಿಂದ, ನಮ್ಮ ಪ್ರಜಾಪ್ರಭುತ್ವ ಬದ್ಧತೆಗಳು ಮತ್ತು ಗೋವಾ ಜನರ ಇಚ್ಛೆಗೆ ಅನುಗುಣವಾಗಿ ನಾವು ಎನ್‌ಡಿಎಯ ಭಾಗವಾಗಿರುವುದನ್ನು ಕೊನೆಗೊಳಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಈ ಹಿಂದೆ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರ್ದೇಸಾಯಿ, ಪಕ್ಷದ ಕಾರ್ಯಕಾರಿ ಸಮಿತಿಯು ಮಂಗಳವಾರ ನಿರ್ಣಯವನ್ನು ಅಂಗೀಕರಿಸಿದ ನಂತರ ಪಕ್ಷದ ನಿರ್ಧಾರವನ್ನು ಪ್ರಕಟಿಸಿತು.

ಮುಂದೆ ನಡೆಯಲಿರುವ ಮಾರ್ಗಾವೊ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲು ಜಿಎಫ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೊತೆಗೆ ರಾಜ್ಯದ ಐದು ಮುನ್ಸಿಪಲ್ ಕೌನ್ಸಿಲ್ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಇದು ಬಹಳ ಹೊಡೆತ ನೀಡಲಿದೆ ಎನ್ನಲಾಗಿದೆ. 2022 ರಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

“ನಾವು ಮೊದಲು ಪರ್ಯಾಯ ಮೈತ್ರಿಯನ್ನು ರೂಪಿಸುವ ಯೋಜನೆಯನ್ನು ಹೊಂದಿದ್ದೇವೆ. ಈಗ ನಾವು ಮಾರ್ಗಾವೊದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ದಿಗಂಬರ್ ಕಾಮಂತ್ ಅವರ ನೇತೃತ್ವದ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದಕ್ಕೆ ನಾವು ಮಾರ್ಗಾವೊ ಸಿವಿಲ್ ಅಲೈಯನ್ಸ್ ಎಂದು ಹೆಸರಿಟ್ಟೀದ್ದೇವೆ. ಈ ಮೈತ್ರಿಯನ್ನು ನಾಗರಿಕ ಸಮಾಜ ಗುಂಪುಗಳು ಅನುಮೋದಿಸಿವೆ, ಅವರೆಲ್ಲರು ನಾನು ಎನ್‌ಡಿಎಯ ಭಾಗವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

“ಬಿಜೆಪಿ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳುವಿಕೆಗೆ ಇದು ಒಂದು ಎಡವಟ್ಟು ಎಂದು ಅವರು ಭಾವಿಸುತ್ತಾರೆ. ಅವರ ಅಭಿಪ್ರಾಯಗಳನ್ನು ಗೌರವಿಸಿ, ನಾವು ಹೊರಬರಲು ನಿರ್ಧರಿಸಿದ್ದೇವೆ. 2022 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಯಸುವ ಪಕ್ಷಗಳ ಒಕ್ಕೂಟವಾದ ‘ಟೀಮ್ ಗೋವಾ’ ಕಲ್ಪನೆಯನ್ನು ನಾನು ಸಮರ್ಥಿಸುತ್ತಿದ್ದೇನೆ” ಎಂದು ಸರ್ದೇಸಾಯಿ ತಿಳಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರದ ಪ್ರಬಲ ವಿಮರ್ಶಕರಲ್ಲಿ ಒಬ್ಬರಾಗಿರುವ ಸರ್ದೇಸಾಯಿ ಅವರು ಪ್ರಾಯೋಗಿಕವಾಗಿ ಇನ್ನು ಮುಂದೆ ತಾವು ಎನ್‌ಡಿಎ ಸದಸ್ಯರಲ್ಲ ಎಂದು ಹೇಳಿದ್ದಾರೆ.

“ಕಳೆದ ಎರಡು ವರ್ಷಗಳಲ್ಲಿ, ಭಗವಾನ್ ಮಹಾವೀರ್ ಅಭಯಾರಣ್ಯ ಮತ್ತು ಮೊಲೆಮ್ ರಾಷ್ಟ್ರೀಯ ಉದ್ಯಾನವನದ ಹಗಲುದರೋಡೆಗೆ ಗೋವಾನ್ನರು ಸಾಕ್ಷಿಯಾಗಿದ್ದಾರೆ. ಇದನ್ನು ಗೋವಾವನ್ನು ಕಲ್ಲಿದ್ದಲು ಕೇಂದ್ರವನ್ನಾಗಿ ಮಾಡಲು ಆಶಿಸುವ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ನಮ್ಮ ಮಹಾದಾಯಿ ನದಿಯನ್ನು ತಿರುಗಿಸುವ ಬಗ್ಗೆ ಮುಖ್ಯಮಂತ್ರಿ ಸಾವಂತ್‌ ಅವರ ಕ್ಷಮಿಸಲಾಗದ ನಿರ್ಲಕ್ಷ್ಯ ಮತ್ತು ಆಘಾತಕಾರಿ ನಿಷ್ಕ್ರಿಯತೆಯನ್ನು ಗೋವಾ ಕಂಡಿದೆ” ಎಂದು ಸರ್ದೇಸಾಯಿ ಹೇಳಿದ್ದಾರೆ.

ಮಾರ್ಚ್ 2019 ರಲ್ಲಿ ಪರಿಕ್ಕರ್ ಅವರ ಮರಣದ ನಂತರ ಸರ್ದೇಸಾಯಿ ಉಪಮುಖ್ಯಮಂತ್ರಿಯಾಗಿ ಅಲ್ಪಾವಧಿಗೆ ಸೇವೆ ಸಲ್ಲಿಸಿದರು. ನಂತರ ಅವರನ್ನು ಸಾವಂತ್ ನೇತೃತ್ವದ ಸರ್ಕಾರ ಉಚ್ಛಾಟಿಸಿತು.


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...