Homeಮುಖಪುಟಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

- Advertisement -
- Advertisement -

ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಂಗಳವಾರ ತಮ್ಮ ಪಕ್ಷದ ಬೆಂಬಲವನ್ನು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಔಪಚಾರಿಕವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರವು “ಗೋವನ್‌‌ ವಿರೋಧಿ” ನೀತಿಗಳನ್ನು ಅನುಸರಿಸುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ ನಮ್ಮ ಸಂಬಂಧವು ಜುಲೈ 2019 ರಲ್ಲಿ ಕೊನೆಗೊಂಡಿತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಮರುಪರಿಶೀಲನೆಗೆ ಅವಕಾಶವಿಲ್ಲ. ಆದ್ದರಿಂದ, ನಮ್ಮ ಪ್ರಜಾಪ್ರಭುತ್ವ ಬದ್ಧತೆಗಳು ಮತ್ತು ಗೋವಾ ಜನರ ಇಚ್ಛೆಗೆ ಅನುಗುಣವಾಗಿ ನಾವು ಎನ್‌ಡಿಎಯ ಭಾಗವಾಗಿರುವುದನ್ನು ಕೊನೆಗೊಳಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಈ ಹಿಂದೆ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರ್ದೇಸಾಯಿ, ಪಕ್ಷದ ಕಾರ್ಯಕಾರಿ ಸಮಿತಿಯು ಮಂಗಳವಾರ ನಿರ್ಣಯವನ್ನು ಅಂಗೀಕರಿಸಿದ ನಂತರ ಪಕ್ಷದ ನಿರ್ಧಾರವನ್ನು ಪ್ರಕಟಿಸಿತು.

ಮುಂದೆ ನಡೆಯಲಿರುವ ಮಾರ್ಗಾವೊ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲು ಜಿಎಫ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೊತೆಗೆ ರಾಜ್ಯದ ಐದು ಮುನ್ಸಿಪಲ್ ಕೌನ್ಸಿಲ್ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಇದು ಬಹಳ ಹೊಡೆತ ನೀಡಲಿದೆ ಎನ್ನಲಾಗಿದೆ. 2022 ರಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

“ನಾವು ಮೊದಲು ಪರ್ಯಾಯ ಮೈತ್ರಿಯನ್ನು ರೂಪಿಸುವ ಯೋಜನೆಯನ್ನು ಹೊಂದಿದ್ದೇವೆ. ಈಗ ನಾವು ಮಾರ್ಗಾವೊದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ದಿಗಂಬರ್ ಕಾಮಂತ್ ಅವರ ನೇತೃತ್ವದ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದಕ್ಕೆ ನಾವು ಮಾರ್ಗಾವೊ ಸಿವಿಲ್ ಅಲೈಯನ್ಸ್ ಎಂದು ಹೆಸರಿಟ್ಟೀದ್ದೇವೆ. ಈ ಮೈತ್ರಿಯನ್ನು ನಾಗರಿಕ ಸಮಾಜ ಗುಂಪುಗಳು ಅನುಮೋದಿಸಿವೆ, ಅವರೆಲ್ಲರು ನಾನು ಎನ್‌ಡಿಎಯ ಭಾಗವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

“ಬಿಜೆಪಿ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳುವಿಕೆಗೆ ಇದು ಒಂದು ಎಡವಟ್ಟು ಎಂದು ಅವರು ಭಾವಿಸುತ್ತಾರೆ. ಅವರ ಅಭಿಪ್ರಾಯಗಳನ್ನು ಗೌರವಿಸಿ, ನಾವು ಹೊರಬರಲು ನಿರ್ಧರಿಸಿದ್ದೇವೆ. 2022 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಯಸುವ ಪಕ್ಷಗಳ ಒಕ್ಕೂಟವಾದ ‘ಟೀಮ್ ಗೋವಾ’ ಕಲ್ಪನೆಯನ್ನು ನಾನು ಸಮರ್ಥಿಸುತ್ತಿದ್ದೇನೆ” ಎಂದು ಸರ್ದೇಸಾಯಿ ತಿಳಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರದ ಪ್ರಬಲ ವಿಮರ್ಶಕರಲ್ಲಿ ಒಬ್ಬರಾಗಿರುವ ಸರ್ದೇಸಾಯಿ ಅವರು ಪ್ರಾಯೋಗಿಕವಾಗಿ ಇನ್ನು ಮುಂದೆ ತಾವು ಎನ್‌ಡಿಎ ಸದಸ್ಯರಲ್ಲ ಎಂದು ಹೇಳಿದ್ದಾರೆ.

“ಕಳೆದ ಎರಡು ವರ್ಷಗಳಲ್ಲಿ, ಭಗವಾನ್ ಮಹಾವೀರ್ ಅಭಯಾರಣ್ಯ ಮತ್ತು ಮೊಲೆಮ್ ರಾಷ್ಟ್ರೀಯ ಉದ್ಯಾನವನದ ಹಗಲುದರೋಡೆಗೆ ಗೋವಾನ್ನರು ಸಾಕ್ಷಿಯಾಗಿದ್ದಾರೆ. ಇದನ್ನು ಗೋವಾವನ್ನು ಕಲ್ಲಿದ್ದಲು ಕೇಂದ್ರವನ್ನಾಗಿ ಮಾಡಲು ಆಶಿಸುವ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ನಮ್ಮ ಮಹಾದಾಯಿ ನದಿಯನ್ನು ತಿರುಗಿಸುವ ಬಗ್ಗೆ ಮುಖ್ಯಮಂತ್ರಿ ಸಾವಂತ್‌ ಅವರ ಕ್ಷಮಿಸಲಾಗದ ನಿರ್ಲಕ್ಷ್ಯ ಮತ್ತು ಆಘಾತಕಾರಿ ನಿಷ್ಕ್ರಿಯತೆಯನ್ನು ಗೋವಾ ಕಂಡಿದೆ” ಎಂದು ಸರ್ದೇಸಾಯಿ ಹೇಳಿದ್ದಾರೆ.

ಮಾರ್ಚ್ 2019 ರಲ್ಲಿ ಪರಿಕ್ಕರ್ ಅವರ ಮರಣದ ನಂತರ ಸರ್ದೇಸಾಯಿ ಉಪಮುಖ್ಯಮಂತ್ರಿಯಾಗಿ ಅಲ್ಪಾವಧಿಗೆ ಸೇವೆ ಸಲ್ಲಿಸಿದರು. ನಂತರ ಅವರನ್ನು ಸಾವಂತ್ ನೇತೃತ್ವದ ಸರ್ಕಾರ ಉಚ್ಛಾಟಿಸಿತು.


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...