Homeಮುಖಪುಟಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

- Advertisement -
- Advertisement -

ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಂಗಳವಾರ ತಮ್ಮ ಪಕ್ಷದ ಬೆಂಬಲವನ್ನು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಔಪಚಾರಿಕವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರವು “ಗೋವನ್‌‌ ವಿರೋಧಿ” ನೀತಿಗಳನ್ನು ಅನುಸರಿಸುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ ನಮ್ಮ ಸಂಬಂಧವು ಜುಲೈ 2019 ರಲ್ಲಿ ಕೊನೆಗೊಂಡಿತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಮರುಪರಿಶೀಲನೆಗೆ ಅವಕಾಶವಿಲ್ಲ. ಆದ್ದರಿಂದ, ನಮ್ಮ ಪ್ರಜಾಪ್ರಭುತ್ವ ಬದ್ಧತೆಗಳು ಮತ್ತು ಗೋವಾ ಜನರ ಇಚ್ಛೆಗೆ ಅನುಗುಣವಾಗಿ ನಾವು ಎನ್‌ಡಿಎಯ ಭಾಗವಾಗಿರುವುದನ್ನು ಕೊನೆಗೊಳಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಈ ಹಿಂದೆ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರ್ದೇಸಾಯಿ, ಪಕ್ಷದ ಕಾರ್ಯಕಾರಿ ಸಮಿತಿಯು ಮಂಗಳವಾರ ನಿರ್ಣಯವನ್ನು ಅಂಗೀಕರಿಸಿದ ನಂತರ ಪಕ್ಷದ ನಿರ್ಧಾರವನ್ನು ಪ್ರಕಟಿಸಿತು.

ಮುಂದೆ ನಡೆಯಲಿರುವ ಮಾರ್ಗಾವೊ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲು ಜಿಎಫ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೊತೆಗೆ ರಾಜ್ಯದ ಐದು ಮುನ್ಸಿಪಲ್ ಕೌನ್ಸಿಲ್ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಇದು ಬಹಳ ಹೊಡೆತ ನೀಡಲಿದೆ ಎನ್ನಲಾಗಿದೆ. 2022 ರಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

“ನಾವು ಮೊದಲು ಪರ್ಯಾಯ ಮೈತ್ರಿಯನ್ನು ರೂಪಿಸುವ ಯೋಜನೆಯನ್ನು ಹೊಂದಿದ್ದೇವೆ. ಈಗ ನಾವು ಮಾರ್ಗಾವೊದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ದಿಗಂಬರ್ ಕಾಮಂತ್ ಅವರ ನೇತೃತ್ವದ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದಕ್ಕೆ ನಾವು ಮಾರ್ಗಾವೊ ಸಿವಿಲ್ ಅಲೈಯನ್ಸ್ ಎಂದು ಹೆಸರಿಟ್ಟೀದ್ದೇವೆ. ಈ ಮೈತ್ರಿಯನ್ನು ನಾಗರಿಕ ಸಮಾಜ ಗುಂಪುಗಳು ಅನುಮೋದಿಸಿವೆ, ಅವರೆಲ್ಲರು ನಾನು ಎನ್‌ಡಿಎಯ ಭಾಗವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

“ಬಿಜೆಪಿ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳುವಿಕೆಗೆ ಇದು ಒಂದು ಎಡವಟ್ಟು ಎಂದು ಅವರು ಭಾವಿಸುತ್ತಾರೆ. ಅವರ ಅಭಿಪ್ರಾಯಗಳನ್ನು ಗೌರವಿಸಿ, ನಾವು ಹೊರಬರಲು ನಿರ್ಧರಿಸಿದ್ದೇವೆ. 2022 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಯಸುವ ಪಕ್ಷಗಳ ಒಕ್ಕೂಟವಾದ ‘ಟೀಮ್ ಗೋವಾ’ ಕಲ್ಪನೆಯನ್ನು ನಾನು ಸಮರ್ಥಿಸುತ್ತಿದ್ದೇನೆ” ಎಂದು ಸರ್ದೇಸಾಯಿ ತಿಳಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರದ ಪ್ರಬಲ ವಿಮರ್ಶಕರಲ್ಲಿ ಒಬ್ಬರಾಗಿರುವ ಸರ್ದೇಸಾಯಿ ಅವರು ಪ್ರಾಯೋಗಿಕವಾಗಿ ಇನ್ನು ಮುಂದೆ ತಾವು ಎನ್‌ಡಿಎ ಸದಸ್ಯರಲ್ಲ ಎಂದು ಹೇಳಿದ್ದಾರೆ.

“ಕಳೆದ ಎರಡು ವರ್ಷಗಳಲ್ಲಿ, ಭಗವಾನ್ ಮಹಾವೀರ್ ಅಭಯಾರಣ್ಯ ಮತ್ತು ಮೊಲೆಮ್ ರಾಷ್ಟ್ರೀಯ ಉದ್ಯಾನವನದ ಹಗಲುದರೋಡೆಗೆ ಗೋವಾನ್ನರು ಸಾಕ್ಷಿಯಾಗಿದ್ದಾರೆ. ಇದನ್ನು ಗೋವಾವನ್ನು ಕಲ್ಲಿದ್ದಲು ಕೇಂದ್ರವನ್ನಾಗಿ ಮಾಡಲು ಆಶಿಸುವ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ನಮ್ಮ ಮಹಾದಾಯಿ ನದಿಯನ್ನು ತಿರುಗಿಸುವ ಬಗ್ಗೆ ಮುಖ್ಯಮಂತ್ರಿ ಸಾವಂತ್‌ ಅವರ ಕ್ಷಮಿಸಲಾಗದ ನಿರ್ಲಕ್ಷ್ಯ ಮತ್ತು ಆಘಾತಕಾರಿ ನಿಷ್ಕ್ರಿಯತೆಯನ್ನು ಗೋವಾ ಕಂಡಿದೆ” ಎಂದು ಸರ್ದೇಸಾಯಿ ಹೇಳಿದ್ದಾರೆ.

ಮಾರ್ಚ್ 2019 ರಲ್ಲಿ ಪರಿಕ್ಕರ್ ಅವರ ಮರಣದ ನಂತರ ಸರ್ದೇಸಾಯಿ ಉಪಮುಖ್ಯಮಂತ್ರಿಯಾಗಿ ಅಲ್ಪಾವಧಿಗೆ ಸೇವೆ ಸಲ್ಲಿಸಿದರು. ನಂತರ ಅವರನ್ನು ಸಾವಂತ್ ನೇತೃತ್ವದ ಸರ್ಕಾರ ಉಚ್ಛಾಟಿಸಿತು.


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...