Homeಮುಖಪುಟಇಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ

ಇಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ

- Advertisement -
- Advertisement -

ಜಾರಿ ನಿರ್ದೇಶನಾಲಯದ (ಇಡಿ) ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ (ಇಎಸಿ-ಪಿಎಂ) ಪೂರ್ಣ ಸಮಯದ ಸದಸ್ಯರನ್ನಾಗಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಮಾರ್ಚ್ 25ರ ಮಂಗಳವಾರ ತಡರಾತ್ರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇಎಸಿ-ಪಿಎಂ ಎಂಬುದು ಸರ್ಕಾರಕ್ಕೆ, ವಿಶೇಷವಾಗಿ ಪ್ರಧಾನ ಮಂತ್ರಿಗೆ ಆರ್ಥಿಕ ಮತ್ತು ಸಂಬಂಧಿತ ವಿಷಯಗಳ ಕುರಿತು ಸಲಹೆ ನೀಡಲು ಸ್ಥಾಪಿಸಲಾದ ಸ್ವತಂತ್ರ ಸಂಸ್ಥೆಯಾಗಿದೆ.

ಸಂಜಯ್ ಕುಮಾರ್ ಮಿಶ್ರಾ ಯಾರು?

ಉತ್ತರ ಪ್ರದೇಶ ಮೂಲದ, 1984 ರ ಬ್ಯಾಚ್‌ನ ನಿವೃತ್ತ ಐಆರ್‌ಎಸ್ (ಆದಾಯ ತೆರಿಗೆ) ಅಧಿಕಾರಿ ಸಂಜಯ್‌ ಕುಮಾರ್ ಮಿಶ್ರಾ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದು, ತನ್ನ ಅಧಿಕಾರವಧಿಯಲ್ಲಿ ಹಲವಾರು ಉನ್ನತ ಪ್ರಕರಣಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಿದ್ದಾರೆ.

ಮಿಶ್ರಾ ಅವರನ್ನು ನವೆಂಬರ್ 19, 2018ರಂದು ಎರಡು ವರ್ಷಗಳ ಅವಧಿಗೆ ಇಡಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಈ ನೇಮಕಾತಿಗೆ ಮೊದಲು, ಮಿಶ್ರಾ ಅವರು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರಾಗಿದ್ದರು.

ನವೆಂಬರ್ 13, 2020ರಂದು ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರ, ಮಿಶ್ರಾ ಅವರ ನೇಮಕಾತಿ ಪತ್ರವನ್ನು ಪೂರ್ವಾನ್ವಯವಾಗಿ ಮಾರ್ಪಡಿಸಿ, ಅವರ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಿತ್ತು.

ನವೆಂಬರ್ 17, 2021ರಂದು, ಕೇಂದ್ರ ಸರ್ಕಾರ ಮಿಶ್ರಾ ಅವರ ಅಧಿಕಾರಾವಧಿಯನ್ನು ನವೆಂಬರ್ 18, 2022ರವರೆಗೆ ಒಂದು ವರ್ಷದವರೆಗೆ ವಿಸ್ತರಿಸಿತ್ತು. ನಂತರ, ಮತ್ತೆ ನವೆಂಬರ್ 18, 2023 ರವರೆಗೆ ಒಂದು ವರ್ಷದವರೆಗೆ ವಿಸ್ತರಿಸಿತ್ತು.

ಜುಲೈ 2023ರಲ್ಲಿ, ‘ರಾಷ್ಟ್ರೀಯ ಹಿತಾಸಕ್ತಿ’ಯ ದೃಷ್ಟಿಯಿಂದ, ಇಡಿ ಮುಖ್ಯಸ್ಥರಾಗಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 15, 2024 ರವರೆಗೆ ವಿಸ್ತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ವಿಸ್ತರಣೆಯನ್ನು ಕೋರಿ ಸಲ್ಲಿಸಲಾದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಹೈ ಪ್ರೊಫೈಲ್ ಪ್ರಕರಣಗಳು

ಮಿಶ್ರಾ ನೇತೃತ್ವದಲ್ಲಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಚುನಾವಣಾ ಆಯೋಗ ತನಿಖೆ ಆರಂಭಿಸಿತ್ತು. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ತನ್ನ ಅಧಿಕಾರಾವಧಿಯಲ್ಲಿ, ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯಂತಹ ಪರಾರಿಯಾದ ಅಪರಾಧಿಗಳನ್ನು ಭಾರತಕ್ಕೆ ಹಸ್ತಾಂತರಿಸಲು ಜಾರಿ ನಿರ್ದೇಶನಾಲಯ ಅನುಮೋದನೆ ಪಡೆದಿತ್ತು.

ಮಿಶ್ರಾ ನೇತೃತ್ವದಲ್ಲಿ ಯೆಸ್ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಣಾ ಕಪೂರ್ ಮತ್ತು ಐಸಿಐಸಿಐ ಬ್ಯಾಂಕ್‌ನ ಮಾಜಿ ಎಂಡಿ-ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚ್ಚರ್ ಅವರಂತಹ ಹಣ ವರ್ಗಾವಣೆ ಆರೋಪ ಹೊತ್ತಿರುವ ವ್ಯಕ್ತಿಗಳನ್ನು ಇಡಿ ಬಂಧಿಸಿದೆ.

ಕುನಾಲ್ ಕಮ್ರಾ ಸ್ಟುಡಿಯೋ ಧ್ವಂಸ ಪ್ರಕರಣ: ಸಂಬಂಧಿಸಿದಂತೆ 12 ಶಿವಸೇನಾ ಕಾರ್ಯಕರ್ತರಿಗೆ ಜಾಮೀನು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...