Homeಮುಖಪುಟಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿಯ ಪ್ರಮುಖ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಉತ್ಪಲ್ ಪರಿಕ್ಕರ್‌, “ಜನರಿಗೆ ಆಯ್ಕೆಯನ್ನು ನೀಡಲು ಬಯಸಿದ್ದರಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪ್ರಸ್ತುತ ಬಿಜೆಪಿಯಲ್ಲಿ ನಿರಂತರವಾಗಿ ಮೌಲ್ಯಗಳು ಕುಸಿಯುತ್ತಿದೆ, ಈ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವರ್ಷಗಳಲ್ಲಿ ನನ್ನ ತಂದೆ ಮನೋಹರ್ ಪರಿಕ್ಕರ್‌ ಪಣಜಿಯ ಜನರೊಂದಿಗೆ ಅಪಾರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ನನಗೂ ಅವರ ಜೊತೆ ಈ ಬಾಂಧವ್ಯ ಬೆಳೆದಿದೆ. ಆದರೆ ಕಾರಣಾಂತರಗಳಿಂದ ಪಣಜಿಗೆ ಉಮೇದುವಾರಿಕೆ ಪಡೆಯಲು ಸಾಧ್ಯವಾಗಿಲ್ಲ. ನನ್ನ ಬದಲಾಗಿ, ಕಳೆದ ಎರಡು ವರ್ಷಗಳ ಹಿಂದೆ ಅವಕಾಶಕ್ಕಾಗಿ ಬಿಜೆಪಿ ಸೇರಿದ ಯಾರಿಗೊ ಅದನ್ನು ನೀಡಲಾಗಿದೆ” ಎಂದು ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಪ್ರಸ್ತುತ ಬಿಜೆಪಿಯು ಪಣಜಿ ಶಾಸಕ ಮತ್ತು ಮಾಜಿ ಕಾಂಗ್ರೆಸ್ಸಿಗ ಅಟಾನಾಸಿಯೊ ‘ಬಾಬುಷ್’ ಮೊನ್ಸೆರೆಟ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರವನ್ನು ಕಳೆದ 25 ವರ್ಷಗಳಲ್ಲಿ ಮನೋಹರ್‌ ಪರಿಕ್ಕರ್‌ ಸ್ಪರ್ಧಿಸುತ್ತಿದ್ದರು. ಹೀಗಾಗಿ ಪಣಜಿಯಿಂದ ತನಗೆ ಟಿಕೆಟ್‌ ನೀಡಬೇಕು ಎಂದು ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ಕೇಳಿದ್ದರು.

ಪಣಜಿ ಕ್ಷೇತ್ರಕ್ಕೆ ಬಿಜೆಪಿ ಮಾಡಿರುವ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ಪಲ್ ಪರಿಕ್ಕರ್‌, “ಈಗಿನ ಅಭ್ಯರ್ಥಿಯ ಬಗ್ಗೆ ಮಾತನಾಡಲು ನನಗೆ ನಾಚಿಕೆಯಾಗುತ್ತಿದೆ. ಬಿಜೆಪಿಯು ನನ್ನ ಪ್ರೊಫೈಲ್ ಮತ್ತು ಅವರು ಟಿಕೆ‌ಟ್‌ ನೀಡಿದ ಅಭ್ಯರ್ಥಿಯ ವಿವರವನ್ನು ನೋಡಬಹುದು. 2019 ರಲ್ಲಿ ಪಣಜಿ ಉಪಚುನಾವಣೆಯ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಕೂಡಾ ಮಾನ್ಸೆರೇಟ್ ಅವರನ್ನು ಟೀಕಿಸಿದ್ದರು” ಎಂದು ಎಂದು ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ನಂಬಿದ್ದ ಮೌಲ್ಯಗಳ ಪರವಾಗಿ ನಿಲ್ಲುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರ ಆತ್ಮದ ಜೊತೆಗೆ ಬಿಜೆಪಿ ಉಳಿದಿದೆಯೆ ಅಥವಾ ಅವರನ್ನು ತೊರೆದಿದೆಯೇ ಎಂದು ಜನರು ಪ್ರಶ್ನಿಸಬೇಕು ಎಂದು ಉತ್ಪಲ್ ಪರಿಕ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

ಶಿವಸೇನೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಯಂತಹ ಇತರ ಪಕ್ಷಗಳ ಬೆಂಬಲವನ್ನು ನೀವು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಉತ್ಪಲ್ ಪರಿಕ್ಕರ್‌, “ಮಾನ್ಸೆರೇಟ್ ಅವರಂತಹ ಅಭ್ಯರ್ಥಿಯ ವಿರುದ್ಧ ಹೋರಾಡಲು ಅಗತ್ಯವಿರುವ ಯಾವುದೇ ಬೆಂಬಲ ಯಾವಾಗಲೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ಬಿಜೆಪಿಯು ಗುರುವಾರ ಪ್ರಕಟಿಸಿದ 34 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾನ್ಸೆರೇಟ್ ಮತ್ತು ಅವರ ಪತ್ನಿ ಜೆನ್ನಿಫರ್ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡು ವರ್ಷಗಳ ಅಂತರವನ್ನು ಹೊರತುಪಡಿಸಿ, ಪಣಜಿ ಕ್ಷೇತ್ರವನ್ನು ದಿವಂಗತ ಮನೋಹರ್‌ ಪರಿಕ್ಕರ್ ಅವರು 1994 ರಿಂದ ಮಾರ್ಚ್ 2019 ರ ವರೆಗೂ ಪ್ರತಿನಿಧಿಸಿದ್ದರು.

ಶಿವಸೇನೆಯ ಸಂಜಯ್ ರಾವತ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈ ಹಿಂದೆಯೆ ಉತ್ಪಲ್ ಪರಿಕ್ಕರ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಣಜಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಬೆಂಬಲಿಸಲು ಎಲ್ಲಾ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದರು.

ಇದನ್ನೂ ಓದಿ:ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...