Homeಮುಖಪುಟಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿಯ ಪ್ರಮುಖ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಉತ್ಪಲ್ ಪರಿಕ್ಕರ್‌, “ಜನರಿಗೆ ಆಯ್ಕೆಯನ್ನು ನೀಡಲು ಬಯಸಿದ್ದರಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪ್ರಸ್ತುತ ಬಿಜೆಪಿಯಲ್ಲಿ ನಿರಂತರವಾಗಿ ಮೌಲ್ಯಗಳು ಕುಸಿಯುತ್ತಿದೆ, ಈ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವರ್ಷಗಳಲ್ಲಿ ನನ್ನ ತಂದೆ ಮನೋಹರ್ ಪರಿಕ್ಕರ್‌ ಪಣಜಿಯ ಜನರೊಂದಿಗೆ ಅಪಾರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ನನಗೂ ಅವರ ಜೊತೆ ಈ ಬಾಂಧವ್ಯ ಬೆಳೆದಿದೆ. ಆದರೆ ಕಾರಣಾಂತರಗಳಿಂದ ಪಣಜಿಗೆ ಉಮೇದುವಾರಿಕೆ ಪಡೆಯಲು ಸಾಧ್ಯವಾಗಿಲ್ಲ. ನನ್ನ ಬದಲಾಗಿ, ಕಳೆದ ಎರಡು ವರ್ಷಗಳ ಹಿಂದೆ ಅವಕಾಶಕ್ಕಾಗಿ ಬಿಜೆಪಿ ಸೇರಿದ ಯಾರಿಗೊ ಅದನ್ನು ನೀಡಲಾಗಿದೆ” ಎಂದು ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಪ್ರಸ್ತುತ ಬಿಜೆಪಿಯು ಪಣಜಿ ಶಾಸಕ ಮತ್ತು ಮಾಜಿ ಕಾಂಗ್ರೆಸ್ಸಿಗ ಅಟಾನಾಸಿಯೊ ‘ಬಾಬುಷ್’ ಮೊನ್ಸೆರೆಟ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರವನ್ನು ಕಳೆದ 25 ವರ್ಷಗಳಲ್ಲಿ ಮನೋಹರ್‌ ಪರಿಕ್ಕರ್‌ ಸ್ಪರ್ಧಿಸುತ್ತಿದ್ದರು. ಹೀಗಾಗಿ ಪಣಜಿಯಿಂದ ತನಗೆ ಟಿಕೆಟ್‌ ನೀಡಬೇಕು ಎಂದು ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ಕೇಳಿದ್ದರು.

ಪಣಜಿ ಕ್ಷೇತ್ರಕ್ಕೆ ಬಿಜೆಪಿ ಮಾಡಿರುವ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ಪಲ್ ಪರಿಕ್ಕರ್‌, “ಈಗಿನ ಅಭ್ಯರ್ಥಿಯ ಬಗ್ಗೆ ಮಾತನಾಡಲು ನನಗೆ ನಾಚಿಕೆಯಾಗುತ್ತಿದೆ. ಬಿಜೆಪಿಯು ನನ್ನ ಪ್ರೊಫೈಲ್ ಮತ್ತು ಅವರು ಟಿಕೆ‌ಟ್‌ ನೀಡಿದ ಅಭ್ಯರ್ಥಿಯ ವಿವರವನ್ನು ನೋಡಬಹುದು. 2019 ರಲ್ಲಿ ಪಣಜಿ ಉಪಚುನಾವಣೆಯ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಕೂಡಾ ಮಾನ್ಸೆರೇಟ್ ಅವರನ್ನು ಟೀಕಿಸಿದ್ದರು” ಎಂದು ಎಂದು ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ನಂಬಿದ್ದ ಮೌಲ್ಯಗಳ ಪರವಾಗಿ ನಿಲ್ಲುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರ ಆತ್ಮದ ಜೊತೆಗೆ ಬಿಜೆಪಿ ಉಳಿದಿದೆಯೆ ಅಥವಾ ಅವರನ್ನು ತೊರೆದಿದೆಯೇ ಎಂದು ಜನರು ಪ್ರಶ್ನಿಸಬೇಕು ಎಂದು ಉತ್ಪಲ್ ಪರಿಕ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

ಶಿವಸೇನೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಯಂತಹ ಇತರ ಪಕ್ಷಗಳ ಬೆಂಬಲವನ್ನು ನೀವು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಉತ್ಪಲ್ ಪರಿಕ್ಕರ್‌, “ಮಾನ್ಸೆರೇಟ್ ಅವರಂತಹ ಅಭ್ಯರ್ಥಿಯ ವಿರುದ್ಧ ಹೋರಾಡಲು ಅಗತ್ಯವಿರುವ ಯಾವುದೇ ಬೆಂಬಲ ಯಾವಾಗಲೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ಬಿಜೆಪಿಯು ಗುರುವಾರ ಪ್ರಕಟಿಸಿದ 34 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾನ್ಸೆರೇಟ್ ಮತ್ತು ಅವರ ಪತ್ನಿ ಜೆನ್ನಿಫರ್ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡು ವರ್ಷಗಳ ಅಂತರವನ್ನು ಹೊರತುಪಡಿಸಿ, ಪಣಜಿ ಕ್ಷೇತ್ರವನ್ನು ದಿವಂಗತ ಮನೋಹರ್‌ ಪರಿಕ್ಕರ್ ಅವರು 1994 ರಿಂದ ಮಾರ್ಚ್ 2019 ರ ವರೆಗೂ ಪ್ರತಿನಿಧಿಸಿದ್ದರು.

ಶಿವಸೇನೆಯ ಸಂಜಯ್ ರಾವತ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈ ಹಿಂದೆಯೆ ಉತ್ಪಲ್ ಪರಿಕ್ಕರ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಣಜಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಬೆಂಬಲಿಸಲು ಎಲ್ಲಾ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದರು.

ಇದನ್ನೂ ಓದಿ:ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...