Homeಮುಖಪುಟಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿಯ ಪ್ರಮುಖ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಉತ್ಪಲ್ ಪರಿಕ್ಕರ್‌, “ಜನರಿಗೆ ಆಯ್ಕೆಯನ್ನು ನೀಡಲು ಬಯಸಿದ್ದರಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪ್ರಸ್ತುತ ಬಿಜೆಪಿಯಲ್ಲಿ ನಿರಂತರವಾಗಿ ಮೌಲ್ಯಗಳು ಕುಸಿಯುತ್ತಿದೆ, ಈ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವರ್ಷಗಳಲ್ಲಿ ನನ್ನ ತಂದೆ ಮನೋಹರ್ ಪರಿಕ್ಕರ್‌ ಪಣಜಿಯ ಜನರೊಂದಿಗೆ ಅಪಾರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ನನಗೂ ಅವರ ಜೊತೆ ಈ ಬಾಂಧವ್ಯ ಬೆಳೆದಿದೆ. ಆದರೆ ಕಾರಣಾಂತರಗಳಿಂದ ಪಣಜಿಗೆ ಉಮೇದುವಾರಿಕೆ ಪಡೆಯಲು ಸಾಧ್ಯವಾಗಿಲ್ಲ. ನನ್ನ ಬದಲಾಗಿ, ಕಳೆದ ಎರಡು ವರ್ಷಗಳ ಹಿಂದೆ ಅವಕಾಶಕ್ಕಾಗಿ ಬಿಜೆಪಿ ಸೇರಿದ ಯಾರಿಗೊ ಅದನ್ನು ನೀಡಲಾಗಿದೆ” ಎಂದು ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಪ್ರಸ್ತುತ ಬಿಜೆಪಿಯು ಪಣಜಿ ಶಾಸಕ ಮತ್ತು ಮಾಜಿ ಕಾಂಗ್ರೆಸ್ಸಿಗ ಅಟಾನಾಸಿಯೊ ‘ಬಾಬುಷ್’ ಮೊನ್ಸೆರೆಟ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರವನ್ನು ಕಳೆದ 25 ವರ್ಷಗಳಲ್ಲಿ ಮನೋಹರ್‌ ಪರಿಕ್ಕರ್‌ ಸ್ಪರ್ಧಿಸುತ್ತಿದ್ದರು. ಹೀಗಾಗಿ ಪಣಜಿಯಿಂದ ತನಗೆ ಟಿಕೆಟ್‌ ನೀಡಬೇಕು ಎಂದು ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ಕೇಳಿದ್ದರು.

ಪಣಜಿ ಕ್ಷೇತ್ರಕ್ಕೆ ಬಿಜೆಪಿ ಮಾಡಿರುವ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ಪಲ್ ಪರಿಕ್ಕರ್‌, “ಈಗಿನ ಅಭ್ಯರ್ಥಿಯ ಬಗ್ಗೆ ಮಾತನಾಡಲು ನನಗೆ ನಾಚಿಕೆಯಾಗುತ್ತಿದೆ. ಬಿಜೆಪಿಯು ನನ್ನ ಪ್ರೊಫೈಲ್ ಮತ್ತು ಅವರು ಟಿಕೆ‌ಟ್‌ ನೀಡಿದ ಅಭ್ಯರ್ಥಿಯ ವಿವರವನ್ನು ನೋಡಬಹುದು. 2019 ರಲ್ಲಿ ಪಣಜಿ ಉಪಚುನಾವಣೆಯ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಕೂಡಾ ಮಾನ್ಸೆರೇಟ್ ಅವರನ್ನು ಟೀಕಿಸಿದ್ದರು” ಎಂದು ಎಂದು ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ನಂಬಿದ್ದ ಮೌಲ್ಯಗಳ ಪರವಾಗಿ ನಿಲ್ಲುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರ ಆತ್ಮದ ಜೊತೆಗೆ ಬಿಜೆಪಿ ಉಳಿದಿದೆಯೆ ಅಥವಾ ಅವರನ್ನು ತೊರೆದಿದೆಯೇ ಎಂದು ಜನರು ಪ್ರಶ್ನಿಸಬೇಕು ಎಂದು ಉತ್ಪಲ್ ಪರಿಕ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

ಶಿವಸೇನೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಯಂತಹ ಇತರ ಪಕ್ಷಗಳ ಬೆಂಬಲವನ್ನು ನೀವು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಉತ್ಪಲ್ ಪರಿಕ್ಕರ್‌, “ಮಾನ್ಸೆರೇಟ್ ಅವರಂತಹ ಅಭ್ಯರ್ಥಿಯ ವಿರುದ್ಧ ಹೋರಾಡಲು ಅಗತ್ಯವಿರುವ ಯಾವುದೇ ಬೆಂಬಲ ಯಾವಾಗಲೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ಬಿಜೆಪಿಯು ಗುರುವಾರ ಪ್ರಕಟಿಸಿದ 34 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾನ್ಸೆರೇಟ್ ಮತ್ತು ಅವರ ಪತ್ನಿ ಜೆನ್ನಿಫರ್ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡು ವರ್ಷಗಳ ಅಂತರವನ್ನು ಹೊರತುಪಡಿಸಿ, ಪಣಜಿ ಕ್ಷೇತ್ರವನ್ನು ದಿವಂಗತ ಮನೋಹರ್‌ ಪರಿಕ್ಕರ್ ಅವರು 1994 ರಿಂದ ಮಾರ್ಚ್ 2019 ರ ವರೆಗೂ ಪ್ರತಿನಿಧಿಸಿದ್ದರು.

ಶಿವಸೇನೆಯ ಸಂಜಯ್ ರಾವತ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈ ಹಿಂದೆಯೆ ಉತ್ಪಲ್ ಪರಿಕ್ಕರ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಣಜಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಬೆಂಬಲಿಸಲು ಎಲ್ಲಾ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದರು.

ಇದನ್ನೂ ಓದಿ:ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...