Homeಮುಖಪುಟಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿಯ ಪ್ರಮುಖ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಉತ್ಪಲ್ ಪರಿಕ್ಕರ್‌, “ಜನರಿಗೆ ಆಯ್ಕೆಯನ್ನು ನೀಡಲು ಬಯಸಿದ್ದರಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪ್ರಸ್ತುತ ಬಿಜೆಪಿಯಲ್ಲಿ ನಿರಂತರವಾಗಿ ಮೌಲ್ಯಗಳು ಕುಸಿಯುತ್ತಿದೆ, ಈ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವರ್ಷಗಳಲ್ಲಿ ನನ್ನ ತಂದೆ ಮನೋಹರ್ ಪರಿಕ್ಕರ್‌ ಪಣಜಿಯ ಜನರೊಂದಿಗೆ ಅಪಾರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ನನಗೂ ಅವರ ಜೊತೆ ಈ ಬಾಂಧವ್ಯ ಬೆಳೆದಿದೆ. ಆದರೆ ಕಾರಣಾಂತರಗಳಿಂದ ಪಣಜಿಗೆ ಉಮೇದುವಾರಿಕೆ ಪಡೆಯಲು ಸಾಧ್ಯವಾಗಿಲ್ಲ. ನನ್ನ ಬದಲಾಗಿ, ಕಳೆದ ಎರಡು ವರ್ಷಗಳ ಹಿಂದೆ ಅವಕಾಶಕ್ಕಾಗಿ ಬಿಜೆಪಿ ಸೇರಿದ ಯಾರಿಗೊ ಅದನ್ನು ನೀಡಲಾಗಿದೆ” ಎಂದು ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಪ್ರಸ್ತುತ ಬಿಜೆಪಿಯು ಪಣಜಿ ಶಾಸಕ ಮತ್ತು ಮಾಜಿ ಕಾಂಗ್ರೆಸ್ಸಿಗ ಅಟಾನಾಸಿಯೊ ‘ಬಾಬುಷ್’ ಮೊನ್ಸೆರೆಟ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರವನ್ನು ಕಳೆದ 25 ವರ್ಷಗಳಲ್ಲಿ ಮನೋಹರ್‌ ಪರಿಕ್ಕರ್‌ ಸ್ಪರ್ಧಿಸುತ್ತಿದ್ದರು. ಹೀಗಾಗಿ ಪಣಜಿಯಿಂದ ತನಗೆ ಟಿಕೆಟ್‌ ನೀಡಬೇಕು ಎಂದು ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ಕೇಳಿದ್ದರು.

ಪಣಜಿ ಕ್ಷೇತ್ರಕ್ಕೆ ಬಿಜೆಪಿ ಮಾಡಿರುವ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ಪಲ್ ಪರಿಕ್ಕರ್‌, “ಈಗಿನ ಅಭ್ಯರ್ಥಿಯ ಬಗ್ಗೆ ಮಾತನಾಡಲು ನನಗೆ ನಾಚಿಕೆಯಾಗುತ್ತಿದೆ. ಬಿಜೆಪಿಯು ನನ್ನ ಪ್ರೊಫೈಲ್ ಮತ್ತು ಅವರು ಟಿಕೆ‌ಟ್‌ ನೀಡಿದ ಅಭ್ಯರ್ಥಿಯ ವಿವರವನ್ನು ನೋಡಬಹುದು. 2019 ರಲ್ಲಿ ಪಣಜಿ ಉಪಚುನಾವಣೆಯ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಕೂಡಾ ಮಾನ್ಸೆರೇಟ್ ಅವರನ್ನು ಟೀಕಿಸಿದ್ದರು” ಎಂದು ಎಂದು ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ನಂಬಿದ್ದ ಮೌಲ್ಯಗಳ ಪರವಾಗಿ ನಿಲ್ಲುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರ ಆತ್ಮದ ಜೊತೆಗೆ ಬಿಜೆಪಿ ಉಳಿದಿದೆಯೆ ಅಥವಾ ಅವರನ್ನು ತೊರೆದಿದೆಯೇ ಎಂದು ಜನರು ಪ್ರಶ್ನಿಸಬೇಕು ಎಂದು ಉತ್ಪಲ್ ಪರಿಕ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

ಶಿವಸೇನೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಯಂತಹ ಇತರ ಪಕ್ಷಗಳ ಬೆಂಬಲವನ್ನು ನೀವು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಉತ್ಪಲ್ ಪರಿಕ್ಕರ್‌, “ಮಾನ್ಸೆರೇಟ್ ಅವರಂತಹ ಅಭ್ಯರ್ಥಿಯ ವಿರುದ್ಧ ಹೋರಾಡಲು ಅಗತ್ಯವಿರುವ ಯಾವುದೇ ಬೆಂಬಲ ಯಾವಾಗಲೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ಬಿಜೆಪಿಯು ಗುರುವಾರ ಪ್ರಕಟಿಸಿದ 34 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾನ್ಸೆರೇಟ್ ಮತ್ತು ಅವರ ಪತ್ನಿ ಜೆನ್ನಿಫರ್ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡು ವರ್ಷಗಳ ಅಂತರವನ್ನು ಹೊರತುಪಡಿಸಿ, ಪಣಜಿ ಕ್ಷೇತ್ರವನ್ನು ದಿವಂಗತ ಮನೋಹರ್‌ ಪರಿಕ್ಕರ್ ಅವರು 1994 ರಿಂದ ಮಾರ್ಚ್ 2019 ರ ವರೆಗೂ ಪ್ರತಿನಿಧಿಸಿದ್ದರು.

ಶಿವಸೇನೆಯ ಸಂಜಯ್ ರಾವತ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈ ಹಿಂದೆಯೆ ಉತ್ಪಲ್ ಪರಿಕ್ಕರ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಣಜಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಬೆಂಬಲಿಸಲು ಎಲ್ಲಾ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದರು.

ಇದನ್ನೂ ಓದಿ:ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...