Homeಮುಖಪುಟನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿರುವುದು ವಿವಾದಿತ ಪೋಸ್ಟ್‌ಗೆ ಕಾರಣವಾಗಿದೆ.

- Advertisement -
- Advertisement -

ತ್ರಿಪುರ ಮತ್ತು ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್‌ರವರು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಅವರ ಚಿತ್ರವನ್ನು ನಾಯಿಯ ಚಿತ್ರದೊಂದಿಗೆ ಕೊಲಾಜ್‌ ಮಾಡಿ ಟ್ವಿಟರ್‌ನಲ್ಲಿ ಹಂಚಿಕೊಂಡು ಬಿಜೆಪಿ ಪಕ್ಷವನ್ನು ದಿಗ್ಭ್ರಮೆಗೆ ತಳ್ಳಿದ್ದಾರೆ.

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿದ್ದಾರೆ ಎಂಬ ನೆಟ್ಟಿಗರೊಬ್ಬರ ಪೋಸ್ಟ್‌ಗೆ ತಥಾಗತ ರಾಯ್‌ರವರು ‘ಮತ್ತೊಮ್ಮೆ ಪಶ್ಚಿಮ ಬಂಗಾಳದಲ್ಲಿ ವೊಡಾಫೋನ್’ ಎಂಬ ಶೀರ್ಷಿಕೆಯೊಂದಿಗೆ ಕೈಲಾಶ್‌ ವಿಜಯವರ್ಗಿಯರವರನ್ನು ನಾಯಿಗೆ ಹೋಲಿಸಿ ಪೋಸ್ಟ್ ಮಾಡಿದ್ದಾರೆ.

ಸುಗತೊ ಎಂಬುವವರು “ಕೈಲಾಶ್‌ ವಿಜಯವರ್ಗಿಯರನ್ನು ಯಾರೂ ಉಲ್ಲೇಖಿಸುತ್ತಿಲ್ಲ. ಬದಲಿಗೆ ಅವರ ಹತ್ತಿರದ ಹಿರಿಯ ಬಿಜೆಪಿ ನಾಯಕರು ಅವರನ್ನು ರಕ್ಷಿಸುತ್ತಿದ್ದಾರೆ. ಆಶ್ಚರ್ಯವೆಂದರೆ ಅವರಿನ್ನು ಪಶ್ಚಿಮ ಬಂಗಾಲದ ಉಸ್ತುವಾರಿಯಾಗಿರುವುದು. ಅದೇ ಸಂದರ್ಭದಲ್ಲಿ ಬಿಜೆಪಿ ಕಲ್ಕತ್ತಾದಲ್ಲಿ ಲೆಕ್ಕಕ್ಕೆ ಇಲ್ಲದಂತಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ವಿಜಯವರ್ಗಿಯ ಅವರ ಜೊತೆಗೆ ವೊಡಾಫೋನ್‌ನ ಪಗ್‌(ನಾಯಿ) ಇರುವ ಫೋಟೊ ಮೂಲಕ ತಥಾಗತ ರಾಯ್ ಪ್ರತಿಕ್ರಿಯಿಸಿದ್ದಾರೆ.

ಬಂಗಾಳದ ಮಾಜಿ ಬಿಜೆಪಿ ಮುಖ್ಯಸ್ಥರಾದ ತಥಾಗತ ರಾಯ್, ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದ ನಾಯಕರನ್ನು ಟೀಕಿಸುತ್ತಾ ಬಂದಿದ್ದಾರೆ. ಮೇಘಾಲಯ ಮತ್ತು ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗತ ರಾಯ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಬಂಗಾಳದಲ್ಲಿ ಬಿಜೆಪಿಯ ಸೋಲಿನ ನಂತರ ರಾಯ್ ಅವರು ಪಕ್ಷದ ಬಂಗಾಳದ ನಾಯಕರಾದ ವಿಜಯವರ್ಗಿಯ ಮತ್ತು ದಿಲೀಪ್ ಘೋಷ್ ಅವರ ಟಿಕೆಟ್ ಹಂಚಿಕೆಯ ನಿರ್ಧಾರಗಳನ್ನು ದೂಷಿಸಿದ್ದರು. ಟ್ವೀಟ್ ಒಂದರಲ್ಲಿ “ಕೈಲಾಶ್-ದಿಲೀಪ್-ಶಿವ್-ಅರವಿಂದ್‌ರವರು ಪ್ರಪಂಚದ ಅತಿ ದೊಡ್ಡ ಪಕ್ಷದ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರ ಹೆಸರನ್ನು ಮಣ್ಣುಪಾಲು ಮಾಡಿದ್ದಾರೆ. ಅಗರ್‌ವಾಲ್ ಭವನದಲ್ಲಿ (ಬಂಗಾಳದ ಬಿಜೆಪಿ ಕಚೇರಿ)  ಮತ್ತು 7 ಸ್ಟಾರ್ ಹೋಟೆಲ್‌ಗಳಲ್ಲಿ ಕುಳಿತು ತೃಣಮೂಲ ಕಾಂಗ್ರೆಸ್‌ನಿಂದ ಹೊರಬಂದ ಕಸಕಡ್ಡಿಗಳಿಗೆ ಟಿಕೆಟ್ ನೀಡಿ ಪಕ್ಷದ ಗೌರವನ್ನು ಹಾಳುಗೆಡವಿದರು” ಎಂದು ಬರೆದಿದ್ದರು.


ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...